ಬೆಳ್ತಂಗಡಿ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ಇದರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಮೂರನೇ ವರ್ಷದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ
ವಿಭಾಗ) ಇಲ್ಲಿಯ 9ನೇ ತರಗತಿಯ ಬ್ರಾಹ್ಮಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಹಾಗೂ 9ನೇ ತರಗತಿಯ ಲಿಖಿತ್ ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ, ತಾಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.













