27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ, ನಾಲ್ಕೂರು ಗ್ರಾಮಸ್ಥರ ಸಮಾಲೋಚನ ಸಭೆ

ಬೆಳ್ತಂಗಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ನಾಲ್ಕೂರು ಸಮಿತಿಯ ಸಮಾಲೋಚನಾ ಸಭೆಯು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಆ 13ರಂದು ನಡೆಯಿತು.

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿರವರು ಕಸ್ತೂರಿ ರಂಗನ್ ವರದಿ ಮತ್ತು 7 ನೇ ಕರಡು ಅಧಿಸೂಚನೆಯ ಪರಿಸರ ಸೂಕ್ಷ್ಮ ವಲಯ ಯೋಜನೆಯಿಂದ ಎದುರಗುವ ಸಮಸ್ಯೆಗಳು ಮತ್ತು ಬೇಡಿಕೆಯನ್ನು ಕಾರ್ಯಕರ್ತರಿಗೆ ತಿಳಿಸಿದರು. ವೈಯಕ್ತಿಕ ಮತ್ತು ಸಂಘ ಸಂಸ್ಥೆ ಗಳ ಮೂಲಕ ಗ್ರಾಮ ಪಂಚಾಯತ್ ಗಳಿಗೆ ಆಕ್ಷೇಪನೆಪತ್ರ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು . ಆ. 20 ರಂದು ಹೋರಾಟದ ರೂಪುರೆಷೆಯ ಸಭೆ ಸುಬ್ರಮಣ್ಯದಲ್ಲಿ ನಡೆಸಲು ತೀರ್ಮಾನಿಸಲಾಯಿತು.

ಜಿಲ್ಲಾ ಪ್ರಮುಖರಾದ ದಾಮೋಧರ್ ಗುಂಡ್ಯ, ಮಿಲನ್ ಬಾಳಿಕಳ, ಮಾಧವ ಶಿರ್ಲಾಲು, ಉಮೇಶ್ ಸುವರ್ಣ, ರವಿ ಪೂಜಾರಿ ಸುಲ್ಕೇರಿ ಹಾಗೂ ನಾಲ್ಕೂರಿನ ಗ್ರಾಮಸ್ಥರು, ಮತ್ತು ಜಿಲ್ಲಾ ಪ್ರಮುಖರು, ರೈತ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹೋರಾಟ ಸಮಿತಿ ರಚಿಸಲಾಗಿದ್ದು ಸಂಚಾಲಕರಾಗಿ ಕರುಣಾಕರ ಹೆಗ್ಡೆ, ಉಪ ಸಂಚಾಲಕರಾಗಿ ದಿನೇಶ್ ಪಿಕೆ ಮತ್ತು ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು.

Related posts

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಚ್ಚಿನ ಪ್ರಾ.ಕೃ.ಪ.ಸ. ಸಂಘದ ನೂತನ ಕಟ್ಟಡಕ್ಕೆ ರೂ.7 ಲಕ್ಷ ಚೆಕ್ ಹಸ್ತಾಂತರ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya
error: Content is protected !!