August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕೇಳ್ಕರ, ಕಲ್ಲಮೆ – ಮುಂಡೂರು ಕೆಸರುಮಯ; ರಸ್ತೆ ಸಂಚಾರಕ್ಕೆ ಅಡ್ಡಿ

ಬೆಳ್ತಂಗಡಿ: ಕರಂಬಾರು ಗ್ರಾಮದ ಕೇಳ್ಕರದಿಂದ ಕಲ್ಲಮೆಯಾಗಿ ಮುಂಡೂರನ್ನು ಸಂಪರ್ಕಿಸುವ ರಸ್ತೆ ಪೂರ್ತಿ ಕೆಸರುಮಯವಾಗಿದ್ದು, ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ.

ಕಳೆದ 10 ವರ್ಷಗಳಿಂದ ಈ ರಸ್ತೆ ಡಮಾರು ಕಂಡಿಲ್ಲ, ಈ ಭಾಗದಲ್ಲಿ ಸುಮಾರು 40 ಮನೆಗಳಿದ್ದು, ಈ ರಸ್ತೆಯನ್ನು ಅವಲಂಭಿಸಿದ್ದಾರೆ.
ರಸ್ತೆ ಹಾಳಾಗಿದ್ದರಿಂದ ಶಾಲಾ ಬಸ್ ಇದರಲ್ಲಿ ಬರುವುದಿಲ್ಲ. ಹೀಗಾಗಿ ಶಾಲಾ ಮಕ್ಕಳು ಸ್ವಲ್ಪ ದೂರ ನಡೆದುಕೊಂಡು ಬಂದು ಬಸ್‌ನಲ್ಲಿ ಹೋಗಬೇಕಾದ ಪರಿಸ್ಥಿತಿಯಿದೆ.


ಈ ಕೆಸರುಮಯ ರಸ್ತೆಯಲ್ಲಿ ನಡೆಯುವಾಗ ಜಾರಿ ಬಿದ್ದರೆ ಮರಳಿ ಮನೆಗೇ ಬರಬೇಕು. ಪ್ರತೀ ವರ್ಷ ಸ್ಥಳೀಯರೊಬ್ಬರು ತಮ್ಮ ಸ್ವಂತ ಖರ್ಚಿನಲ್ಲಿ ಶ್ರಮದಾನದ ಮೂಲಕ ಮಳೆಗಾಲದಲ್ಲಿ ರಸ್ತೆ ರಿಪೇರಿ ಮಾಡಿಸುತ್ತಿದ್ದರು. ಆದರೆ ಈ ಬಾರಿ ಇದರ ದುರಸ್ತಿ ನಡೆಯದಿರುವುದರಿಂದ ರಸ್ತೆ ಕೆಸರುಮಯವಾಗಿದೆ. ಸಂಬಂಧಪಟ್ಟವರು ಇದರ ಬಗ್ಗೆ ಗಮನ ಹರಿಸುವಂತೆ ನಾಗರಿಕರು ಒತ್ತಾಯಿಸಿದ್ದಾರೆ.

Related posts

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!