ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ವಲಯದ ಕನ್ನಾಜೆ ಕಾರ್ಯಕ್ಷೇತ್ರದ ವತಿಯಿಂದ ಲಾಯಿಲ ರಾಘವೇಂದ್ರ ಮಠದ ವಠಾರದಲ್ಲಿ ಸ್ವಚ್ಛತಾ ಶ್ರಮದಾನ ಆ.13 ರಂದು ನಡೆಸಿಕೊಡಲಾಯಿತು.

ಈ ಸಂದರ್ಭದಲ್ಲಿ ರಾಘವೇಂದ್ರ ಮಠದ ಕಾರ್ಯದರ್ಶಿಗಳಾದ ವಸಂತ ಸುವರ್ಣ ಹಾಗೂ ಮಠದ ಸಿಬ್ಬಂದಿ ವರ್ಗ ವಲಯದ ಮೇಲ್ವಿಚಾರಕರಾದ ಜಿ ರವಿ ಒಕ್ಕೂಟದ ಅಧ್ಯಕ್ಷ ಶ್ರೀಮತಿ ಯಶೋಧ ಹುಣ್ಸೆಕಟ್ಟೆ, ಒಕ್ಕೂಟದ ಅಧ್ಯಕ್ಷ ದಯಾನಂದ ಕೋಟ್ಯಾನ್, ಬೆಳ್ತಂಗಡಿ ವಲಯದ ಭಜನಾ ಮಂಡಳಿ ಅಧ್ಯಕ್ಷ ಗಣೇಶ ಕನ್ನಾಜೆ, ರತ್ನಶ್ರೀ ಜ್ಞಾನವಿಕಾಸ ಕೇಂದ್ರದ ಸದಸ್ಯರು ಮತ್ತು ಸ್ಥಳೀಯ ಸಂಘದ ಸದಸ್ಯರು ಹಾಗೂ ಸೇವಾ ಪ್ರತಿನಿಧಿಗಳಾದ ಗುಣವತಿ ,ಜ್ಯೋತಿ , ಕೇಶವ ಉಪಸ್ಥಿತರಿದ್ದರು.
ವಲಯದ ಮೇಲ್ವಿಚಾರಕ ಜಿ ರವಿ ಧನ್ಯವಾದಗಳನ್ನು ಸಲ್ಲಿಸಿದರು. ಮಠದ ವತಿಯಿಂದ ವಸಂತ ಸುವರ್ಣ ಇವರು ಕ್ಷೇತ್ರದ ವತಿಯಿಂದ ಮಠಕ್ಕೆ ದೊರೆದಿರುವ ಸಹಕಾರವನ್ನು ಶ್ಲಾಘಿಸಿದರು.













