27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು : ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಇಂದಬೆಟ್ಟು ವಲಯದ ನಾವೂರು ಎ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮವನ್ನು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಲ್ಲಾಜೆ ಯಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದರವರು ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ಆಹಾರ ಪದ್ಧತಿಯನ್ನುಉಳಿಸುವ ಈ ಮಾಹಿತಿ ಕಾರ್ಯಕ್ರಮ ಉತ್ತಮವಾಗಿದ್ದು ಇದರ ಪ್ರಯೋಜನವನ್ನು. ಪಡೆಯುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ಮಲ್ಲಿಕಾ ಮಹಿಳೆಗೆ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಇದ್ದರೆ ಅವರ ಕುಟುಂಬಕ್ಕೆ ಉತ್ತಮ ಪೌಷ್ಟಿಕ ಆಹಾರ ದೊರೆಯಲು ಸಾಧ್ಯ. ಮಕ್ಕಳಿಗೆ ಅವರಿಗೆ ಇಷ್ಟವಾಗುವ ರೀತಿಯಲ್ಲಿ ಪೌಷ್ಟಿಕ ಆಹಾರ ತಯಾರಿ ಮಾಡಿ ನಾವು ನೀಡಿದ್ದಲ್ಲಿ ಮಕ್ಕಳು ಇಷ್ಟಪಟ್ಟು ತಿನ್ನುತ್ತಾರೆ. ಇವತ್ತಿನ ಕಾರ್ಯಕ್ರಮ ಉತ್ತಮವಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾದ ರತ್ನಾವತಿ ರವರು ಕೇಸರಿ ಬಿಳಿ ಹಸಿರು ತರಕಾರಿ ಸೇವನೆ ಬಗ್ಗೆ ಸೊಪ್ಪು ಕಾಳು ತರಕಾರಿಯಲ್ಲಿರುವ ಪೌಷ್ಟಿಕಾಂಶದ ಬಗ್ಗೆ ಹಾಗೂ ನಾವು ನಮಗಾಗಿ ಪೌಷ್ಟಿಕ ಆಹಾರ ತಯಾರಿ ಮಾಡಬೇಕು. ಆಗ ನಮ್ಮ ಆರೋಗ್ಯದೊಂದಿಗೆ ನಮ್ಮ ಕುಟುಂಬದ ಸದಸ್ಯರ ಆರೋಗ್ಯ ಉತ್ತಮವಾಗಿರಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಮೇಘನಾ ಹಾಗೂ ವಲಯ ಮೇಲ್ವಿಚಾರಕರಾದ ಉಷಾಪ್ರಸಾದ್ ಸಂಯೋಜಕಿ ಶೃತಿ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ನಿರ್ಮಲಾ ಸ್ವಾಗತಿಸಿ, ಸೇವಪ್ರತಿನಿಧಿ ಸುನೀತಾ ಧನ್ಯವಾದ ನೀಡಿದರು.

Related posts

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya

ಸರ್ಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು -ಪ್ರಥಮ ಪಿ ಯು ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ :

Suddi Udaya
error: Content is protected !!