ಬೆಳ್ತಂಗಡಿ: ಶ್ರದ್ದಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಒಕ್ಕೂಟದ ವತಿಯಿಂದ ದೇಶದ 80 ನೇಯ ಸ್ವಾತಂತ್ರೋತ್ಸವದ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರು ಈ ಕಾರ್ಯವನ್ನು ಶ್ಲಾಘಿಸಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಪ್ರಶಾಂತ್ ಜೈನ್, ಜಿತೇಶ್ ಜೈನ್, ವಲಯ ಮೇಲ್ವಿಚಾರಕ ಪ್ರೇಮ್ ಪ್ರಸಾದ್ ಉಪಸ್ಥಿತರಿದ್ದರು.
ಒಕ್ಕೂಟ ಅಧ್ಯಕ್ಷ ವಿಜಯ, ಸೇವಾಪ್ರತಿನಿಧಿಗಳಾದ ಪ್ರೇಮಲತಾ ಮತ್ತು ಜಯಂತಿ, ಶೌರ್ಯ ವಿಪತ್ತು ಸದಸ್ಯರು ಭಾಗವಹಿಸಿದ್ದರು.
ಅಲ್ಲದೆ ಒಕ್ಕೂಟದ 15 ಮಂದಿ ಸದಸ್ಯರೂ ಭಾಗವಹಿಸಿದ್ದರು.













