August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕೇಳ್ಕರ, ಕಲ್ಲಮೆ – ಮುಂಡೂರು ಕೆಸರುಮಯ; ರಸ್ತೆ ಸಂಚಾರಕ್ಕೆ ಅಡ್ಡಿ

ಬೆಳ್ತಂಗಡಿ: ಕರಂಬಾರು ಗ್ರಾಮದ ಕೇಳ್ಕರದಿಂದ ಕಲ್ಲಮೆಯಾಗಿ ಮುಂಡೂರನ್ನು ಸಂಪರ್ಕಿಸುವ ರಸ್ತೆ ಪೂರ್ತಿ ಕೆಸರುಮಯವಾಗಿದ್ದು, ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ.

ಕಳೆದ 10 ವರ್ಷಗಳಿಂದ ಈ ರಸ್ತೆ ಡಮಾರು ಕಂಡಿಲ್ಲ, ಈ ಭಾಗದಲ್ಲಿ ಸುಮಾರು 40 ಮನೆಗಳಿದ್ದು, ಈ ರಸ್ತೆಯನ್ನು ಅವಲಂಭಿಸಿದ್ದಾರೆ.
ರಸ್ತೆ ಹಾಳಾಗಿದ್ದರಿಂದ ಶಾಲಾ ಬಸ್ ಇದರಲ್ಲಿ ಬರುವುದಿಲ್ಲ. ಹೀಗಾಗಿ ಶಾಲಾ ಮಕ್ಕಳು ಸ್ವಲ್ಪ ದೂರ ನಡೆದುಕೊಂಡು ಬಂದು ಬಸ್‌ನಲ್ಲಿ ಹೋಗಬೇಕಾದ ಪರಿಸ್ಥಿತಿಯಿದೆ.


ಈ ಕೆಸರುಮಯ ರಸ್ತೆಯಲ್ಲಿ ನಡೆಯುವಾಗ ಜಾರಿ ಬಿದ್ದರೆ ಮರಳಿ ಮನೆಗೇ ಬರಬೇಕು. ಪ್ರತೀ ವರ್ಷ ಸ್ಥಳೀಯರೊಬ್ಬರು ತಮ್ಮ ಸ್ವಂತ ಖರ್ಚಿನಲ್ಲಿ ಶ್ರಮದಾನದ ಮೂಲಕ ಮಳೆಗಾಲದಲ್ಲಿ ರಸ್ತೆ ರಿಪೇರಿ ಮಾಡಿಸುತ್ತಿದ್ದರು. ಆದರೆ ಈ ಬಾರಿ ಇದರ ದುರಸ್ತಿ ನಡೆಯದಿರುವುದರಿಂದ ರಸ್ತೆ ಕೆಸರುಮಯವಾಗಿದೆ. ಸಂಬಂಧಪಟ್ಟವರು ಇದರ ಬಗ್ಗೆ ಗಮನ ಹರಿಸುವಂತೆ ನಾಗರಿಕರು ಒತ್ತಾಯಿಸಿದ್ದಾರೆ.

Related posts

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ಭಾರೀ ಮಳೆಗೆ ಶಿಶಿಲ ಸೇತುವೆ ಮುಳುಗಡೆ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya
error: Content is protected !!