August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ. ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಟಿಡೊಂಜಿ ದಿನ ಕಾರ್ಯಕ್ರಮ ಆ.13ರಂದು ನಡೆಯಿತು.

ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಪ್ರೌಢ ಶಾಲೆಯ ತುಳು ಶಿಕ್ಷಕ ಶಶಿಧರ್ ಮುಚ್ಚರು ಹಾಗೂ ಮೇಲಿನಡ್ಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಚಿನ್ನಯ್ಯ ಗೌಡರವರು ಚೆನ್ನಮಣೆ ಆಟ ಆಡಿ ಕಲಶಕ್ಕೆ ಅಕ್ಕಿ ಹಾಕುವುದರ ಮೂಲಕ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರು ವಹಿಸಿ ಮಾತನಾಡಿ ಆಟಿ ತಿಂಗಳಲ್ಲಿ ಆಡುವಂತಹ ಆಟಗಳು ಮತ್ತು ಆಟಿ ಅಂದರೆ ಏನು, ಆಟಿಯಲ್ಲಿ ಬಳಸುವಂತಹ ಬೇರೆ ಬೇರೆ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಶ್ರೀಮತಿ ಕಮಲ ಹಾಗೂ ಶಾಲೆಯಹಿರಿಯ ಶಿಕ್ಷಕಿಯಾದ ಶ್ರೀಮತಿ ತೇಜಾವತಿಯವರು ಉಪಸ್ಥಿತರಿದ್ದರು. ಹಿರಿಯರಾದ ಶ್ರೀಮತಿ ಕಮಲ ಮಕ್ಕಳಿಗೆ ಅಜ್ಜಿ ಕಥೆಗಳನ್ನು ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ತುಳು ನೃತ್ಯಗಳನ್ನು ಪ್ರಸ್ತುತಪಡಿಸಲಾಯಿತು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಿಸಲಾಯಿತು. ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿದರು, ಗೌರೀಶ್ ಎಂ ಧನ್ಯವಾದಗೈದ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿಯಾದ ಕುಮಾರಿ ಜಿತಿಕ್ಷ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಉಜಿರೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ತಣ್ಣೀರುಪಂತ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 306.80ಕೋಟಿ ವ್ಯವಹಾರ, ರೂ. 1.09 ಕೋಟಿ ಲಾಭ, ಶೇ.12 ಡಿವಿಡೆಂಡ್

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya
error: Content is protected !!