ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಬಳಂಜ ಬಿ ಒಕ್ಕೂಟದ ವತಿಯಿಂದ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಬಳಂಜ ಬಿ ಒಕ್ಕೂಟ ದ ಅಧ್ಯಕ್ಷ ಕೆ. ಎ ಅಬುಬಕ್ಕರ್, ದುರ್ಗಾಪರಮೆಶ್ವರಿ ದೇವಸ್ಥಾನದ ಅರ್ಚಕರಾದ ಮಂಜುನಾಥ ಭಟ್, ರಾಘವೇಂದ್ರ ಭಟ್ ವಲಯದ ಮೇಲ್ವಿಚಾರಕರಾದ ಸಂದೇಶ್ , ಸೇವಾ ಪ್ರತಿನಿಧಿ ಪ್ರಮೀಳಾ ಆಚಾರ್ಯ , ನಿಕಟಪೂರ್ವ ಒಕ್ಕೂಟದ ಅಧ್ಯಕ್ಷ ಪ್ರಮೋದ್ ದೇವಾಡಿಗ, ಪ್ರಜ್ಞಾ ಜ್ಞಾನವಿಕಾಸದ ಸದಸ್ಯರು, ಒಕ್ಕೂಟದ ಸದಸ್ಯರು ಭಾಗವಹಿಸಿದರು.













