ಓಡೀಲು: ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯಲಿರುವ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಜನಾರ್ದನ ಸ್ವಾಮಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗಂಗಾಧರ ಭಟ್ ಕೆವುಡೇಲು ಹಾಗೂ ಸಂತೋಷ್ ಕುಮಾರ್ ಜೈನ್ ಪಡಂಗಡಿ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಚಿದಾನಂದ ಇಡ್ಯಾ, ಕಾರ್ಯದರ್ಶಿ ಸಂತೋಷ್ ಶೆಟ್ಟಿ ಅಲ್ಲಂದೋಡಿ, ಉಪಾಧ್ಯಕ್ಷ ಸತೀಶ್ ಪಾದೆ, ಅರ್ಚಕರಾದ ವಿಷ್ಣು ಭಟ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.













