August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಆಟಿದ ಕೂಟ

ಉಜಿರೆ: ತುಳುನಾಡಿನ ಆಟಿ ತಿಂಗಳ ಆಚರಣೆ, ಸಾಂಪ್ರದಾಯಿಕ ಆಹಾರ ತಯಾರಿಕೆ ಮತ್ತು ಗ್ರಾಮೀಣ ಸೊಗಡಿನ ಸಂಸ್ಕೃತಿಯನ್ನು ಪ್ರಶಿಕ್ಷಣಾರ್ಥಿಗಳಿಗೆ ಪರಿಚಯಿಸುವ ಸದುದ್ದೇಶದಿಂದ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ “ಆಟಿದ ಕೂಟ” ಕಾರ್ಯಕ್ರಮವು ಸಡಗರ ಸಂಭ್ರಮದಿಂದ ನಡೆಯಿತು.

ಮುಖ್ಯ ಅತಿಥಿಯಾಗಿ ಯಶವಂತ್ ಬೆಳ್ತಂಗಡಿ, ರಂಗನಿರ್ದೇಶಕರು, ಕಲಾಕೇಂದ್ರ ಎಸ್.ಡಿ.ಎಂ. ಕಾಲೇಜು ಉಜಿರೆ ಇವರು ಮಾತನಾಡುತ್ತಾ ನಮ್ಮ ತುಳುನಾಡು ಪರಶುರಾಮನ ನಾಡು. ಈ ನಾಡಿನ ಮಣ್ಣಿಗೆ ವಿಶೇಷ ಮನ್ನಣೆಯಿದೆ. ನಮ್ಮೆಲ್ಲರ ಪೂರ್ವಜರು ಆಗಿನ ಕಾಲದಿಂದಲೂ ಆಚರಿಸಿಕೊಂಡು ಬರುತ್ತಿದ್ದ ಈ ಆಟಿದ ಕೂಟದ ಹಳೆಯ ಸಂಪ್ರದಾಯ, ಔಷಧೀಯ ಸಸ್ಯಗಳ ಸಮರ್ಪಕ ಬಳಕೆ ಮತ್ತು ಅಳಿವಿನಂಚಿನಲ್ಲಿರುವ ಸಾಂಪ್ರದಾಯಿಕ ಅಡುಗೆಗಳನ್ನು ಇಂದಿನ ಯುವಜನತೆಗೆ ಪರಿಚಯಿಸುವ ಉದ್ದೇಶದಿಂದ ಈ ಹಬ್ಬವನ್ನು ಆಚರಿಸುತ್ತೇವೆ.

ತುಳುನಾಡ ಹಬ್ಬಗಳು ವಿಶೇಷತೆಯಿಂದ ಕೂಡಿದ್ದು ಇದನ್ನು ಆಚರಿಸುವುದರಿಂದ ಅವರ ಮನಸ್ಸಿಗೆ ಆನಂದ ಮತ್ತು ನೆಮ್ಮದಿ ಲಭಿಸುತ್ತದೆ. ದೈವರಾಧನೆಯು ಕರಾವಳಿ ಜನರ ಅತ್ಯಂತ ಪವಿತ್ರ ಹಾಗೂ ಧಾರ್ಮಿಕ ಆಚರಣೆಯಾಗಿದೆ. ಕೋಲ, ಪಾಡ್ದನ, ದೈವದ ಪಾತ್ರಿ, ಮುಖವರ್ಣಿಕೆಯ ಬಗ್ಗೆ ತಿಳಿಸಿ, ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕುತ್ತಾ ಆಟಿ ತಿಂಗಳಿನಲ್ಲಿ ಹಿಂದಿನ ಕಾಲದ ಕಷ್ಟ ಹೇಗಿತ್ತೆಂದು ವಿವರಿಸಿ ಹೇಳಿದರು. ತುಳುನಾಡನ್ನು ಉಳಿಸಿ ಬೆಳೆಸಬೇಕು ಈ ನಾಡಿಗೆ ಬೇರೆ ಕಡೆೆಯಿಂದ ಬಂದವರಿಗೆ ತುಳು ಭಾಷೆಯನ್ನು ಕಲಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಸಲ್ಡಾನ ಮಾತಾನಾಡುತ್ತಾ ಈ ಆಟಿ ಮಾಸವು ಮಳೆಗಾಲದಿಂದ ಕೂಡಿದ್ದು ಎಲ್ಲೆಲ್ಲೂ ಹಸಿರು ಪ್ರಕೃತಿಯಿಂದ ಕೂಡಿರುವುದು ವಿಶೇಷವಾಗಿರುವಂತದ್ದು. ಧಾರ್ಮಿಕ ಆಚರಣೆಗಳು, ಸಾಂಪ್ರದಾಯಿಕ ಆಚರಣೆಗಳು ಮತ್ತು ಪ್ರಕೃತಿಯೊಂದಿಗಿನ ಸಂಬಂಧಗಳ ಜತೆ ಜನರ ಬದುಕು ಸಾಗುತ್ತಿರುತ್ತದೆ. ಪ್ರತಿಯೊಂದು ಆಚರಣೆಗಳ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ಆಚರಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.


ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಸುಮಾರು 30 ಬಗೆಯ ವೈವಿಧ್ಯಮಯ ಆಟಿ ತಿಂಡಿ-ತಿನಿಸುಗಳನ್ನು ತಯಾರಿಸಿ ಪ್ರದರ್ಶಿಸಲಾಯಿತು. ಪ್ರಶಿಕ್ಷಣಾರ್ಥಿಗಳಿಂದ ಸಾಂಸ್ಕöÈತಿಕ ಕಾರ್ಯಕ್ರಮ ಮತ್ತು ಆಟೋಟಗಳು ನೆರವೇರಿದವು.
ಕಾರ್ಯಕ್ರಮದಲ್ಲಿ ಎಲ್ಲಾ ಸಹ ಪ್ರಾಧ್ಯಾಪಕರು, ಸಿಬ್ಬಂದಿ ವರ್ಗದವರು ಮತ್ತು ಬಿ.ಎಡ್. ಮತ್ತು ಡಿ.ಎಡ್. ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.
ಪ್ರಶಿಕ್ಷಣಾರ್ಥಿಗಳಾದ ಗಾಯನ ಮತ್ತು ತಂಡದವರು ಪ್ರಾರ್ಥಿಸಿ, ಹೇಮಲತಾ ಸ್ವಾಗತಿಸಿ, ದೀಪಿಕಾ ವಂದಿಸಿ, ಪ್ರಶ್ವಿತ್ ಮತ್ತು ಸಾಯಿಧೃತಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಶ್ರುತ ಆಳ್ವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya

ಜಯನಗರ-ಗುರಿಪಳ್ಳದಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ : ಡಾ| ಗೋಪಾಲ ಕೃಷ್ಣ ಕೆ.

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
error: Content is protected !!