August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ ಧರ್ಮಸ್ಥಳ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಸದಾನಂದ ಮುಂಡಾಜೆ, ನಿವೃತ್ತ ಎಸ್.ಡಿ.ಎಂ ಕಾಲೇಜಿನ ಸಿಬ್ಬಂದಿ ಕಾರ್ಯಕ್ರಮದ ಉದ್ಘಾಟನೆಯನ್ನು ಕಳಸಕ್ಕೆ ಅಕ್ಕಿಹಾಕಿ ಹಿಂಗಾರವನ್ನು ಬಿಡಿಸಿ ದೀಪ ಬೆಳಗಿಸಿ ಚೆನ್ನಮನೆ ಆಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಟಿ ವಿಶೇಷತೆಯ ಬಗ್ಗೆ ಮಾತನಾಡಿದರು. ಹಿರಿಯರು ಮಾಡಿಕೊಂಡು ಬಂದ ಆಚರಣೆಯ ಬಗ್ಗೆ ಮಕ್ಕಳಿಗೆ ತಿಳಿಸಿದರು.

ಹಿರಿಯರ ಕಾಲದಲ್ಲಿ ಆಟಿ ತಿಂಗಳ ಎಂದರೆ ಅದು ಕಷ್ಟದ ಸಮಯ., ರೋಗರುಜಿನಗಳನ್ನು ಹೊಡೆದೋಡಿಸಲು ಮನೆ ಮನೆಗೆ ಆಟಿಕಲೆಂಜ ಬರುತ್ತಾನೆ ಎಂದು ಹೇಳಿದರು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಇವರು ಆಟಿ ವಿಶೇಷತೆ ಬಗ್ಗೆ ಮಕ್ಕಳಿಗೆ ತಿಳಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ನಾಯ್ಕ್ ಆಟಿ ತಿಂಗಳ ಬಗ್ಗೆ ಮಕ್ಕಳಿಗೆ ತಿಳಿಸಿದರು. ಆಟಿ ತಿಂಗಳ ಪರಿಕರಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಯು ಆಟಿ ಕಲೆಂಜದ ಪ್ರದರ್ಶನ ಮಾಡಿದರು.. ಸುಮಾರು 20 ಬಗೆಯ ಆಟಿ ತಿಂಗಳ ಸಾಂಪ್ರದಾಯಿಕ ತಿಂಡಿಗಳನ್ನು ಮಕ್ಕಳಿಗೆ ಮತ್ತು ಬಂದವರಿಗೆ ವಿತರಿಸಲಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ಕೂಸಪ್ಪ , ಶಿಕ್ಷಕಿಯಾದ ಜ್ಯೋತಿವರು ಸ್ವಾಗತಿಸಿದರು. ಶಿಕ್ಷಕಿ ಸುಜಾತ ಧನ್ಯವಾದ ಮಾಡಿದರು.

Related posts

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

Suddi Udaya
error: Content is protected !!