August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ, ಲಾಯಿಲ, ನಾವೂರು, ಚಾರ್ಮಾಡಿ, ಕುಂಟಿನಿ, ಕಕ್ಕೇಜಾಲ್, ಸುನ್ನತ್‌ಕೆರೆ, ಮದ್ದಡ್ಕ, ಕನ್ನಡಿಕಟ್ಟೆ, ಕಲ್ಲೇರಿ ಹಾಗೂ ಪುಂಜಾಲಕಟ್ಟೆ ಸೇರಿದಂತೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ಪಕ್ಷದ ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು.
“ಸ್ವಾತಂತ್ರ್ಯ ಎಲ್ಲರ ಹಕ್ಕು; ವಿಚಾರಣಾಧೀನರಿಗೂ ಅದೇ ಹಕ್ಕು” ಎಂಬ ಸಂದೇಶದೊಂದಿಗೆ ನಡೆದ ಕಾರ್ಯಕ್ರಮಗಳಲ್ಲಿ ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನಬದ್ಧ ಹಕ್ಕುಗಳು ಹಾಗೂ ಸಮಾನತೆಯ ಮಹತ್ವವನ್ನು ಸಾರಲಾಯಿತು.

ಕಾರ್ಯಕ್ರಮಗಳಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ತ್ವಾಹಿರ್ ಬಂಗೇರಕಟ್ಟೆ, ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸಾಲಿಹ್ ಮದ್ದಡ್ಕ, ಸದಸ್ಯರಾದ ಮುಸ್ತಫಾ ಜಿ.ಕೆ., ಖಾದರ್ ನಾವೂರು, ಅಶ್ರಫ್ ಕಟ್ಟೆ ಸೇರಿದಂತೆ ಬ್ಲಾಕ್ ಹಾಗೂ ಬ್ರಾಂಚ್ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Related posts

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ : ಕುಣಿತ ಭಜನಾ ತರಬೇತಿ ನೀಡುತ್ತಿರುವ ತರಬೇತಿದಾರರುಗಳ ಸಭೆ: ಪ್ರಥಮ ಬಾರಿಗೆ ಭಜನೆಯಲ್ಲಿ ನಿನ್ನೆ ಇಂದು ನಾಳೆಯ ಬಗ್ಗೆ ಗಂಭೀರ ಚರ್ಚೆ

Suddi Udaya
error: Content is protected !!