August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ.) (CBK) ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ. 15ರಂದು ಸಿಬಿಕೆ ಕಚೇರಿಯಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಗಸ್ಟೀನ್ ಟಿ. ಎ. ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿ , ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ದೇಶದ ಏಕತೆ, ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಸಮಾಜಮುಖಿ ಸೇವಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಸಂಘದ ಕಾರ್ಯದರ್ಶಿ ಶಿಜೋ ಜೋಸೆಫ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ. ಟಿ. ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಸ್ವಾತಂತ್ರ್ಯದ ಮಹತ್ವವನ್ನು ಅರಿತು ದೇಶದ ಏಕತೆ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಗೌರವ ಸಲಹೆಗಾರರಾದ ಜೋಸೆಫ್ ಕೆ. ಡಿ. ಅವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ, ದೇಶದ ಪ್ರಗತಿಗೆ ಯುವಜನರು ಹಾಗೂ ಸಮಾಜದ ಪ್ರತಿಯೊಬ್ಬರೂ ಸಕಾರಾತ್ಮಕವಾಗಿ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೋಶಾಧಿಕಾರಿ ರಂಜಿತ್ ಪಿ. ಎಸ್., ಕಾರ್ಯಕಾರಿಣಿ ಸಮಿತಿ ಸದಸ್ಯರು ಹಾಗೂ ಸಿಬಿಕೆ ಸದಸ್ಯರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

Suddi Udaya

ಗುರುವಾಯನಕೆರೆ “ಎಕ್ಸೆಲ್” ಟೆಕ್ನೋ ಶಾಲೆಯಲ್ಲಿ ದೀಕ್ಷಾರಂಭ

Suddi Udaya

ಬೆಳ್ತಂಗಡಿ: ಓಬಿಸಿ ಮೋರ್ಚಾದ ಸಭೆ

Suddi Udaya
error: Content is protected !!