August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿಯೋಗದಿಂದ ಶಾಸಕ ಹರೀಶ್ ಪೂಂಜಾರಿಗೆ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಳಿ ಸಾಕಾಣಿಕೆ ವಲಯವು ಎದುರಿಸುತ್ತಿರುವ ತೀವ್ರ ಆರ್ಥಿಕ ಸಂಕಷ್ಟ ಹಾಗೂ ರೈತರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ (ರಿ.)’ ನಿಯೋಗವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.

ಕರಾವಳಿ ಭಾಗದಲ್ಲಿ ಸಾವಿರಾರು ಕುಟುಂಬಗಳ ಜೀವನೋಪಾಯವಾಗಿರುವ ಕೋಳಿ ಸಾಕಾಣಿಕೆ ಉದ್ಯಮವು ಪ್ರಸ್ತುತ ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ, ಪ್ರಕೃತಿ ವಿಕೋಪ ಮತ್ತು ನೊಣದ ಹಾವಳಿಯಿಂದ ತೀವ್ರ ಹಾನಿಗೀಡಾಗಿದೆ. ಈ ವಲಯವನ್ನು ಉಳಿಸಿಕೊಳ್ಳಲು ತುರ್ತು ಕ್ರಮಗಳ ಅಗತ್ಯವಿದೆ ಎಂದು ಒಕ್ಕೂಟದ ಪದಾಧಿಕಾರಿಗಳು ಶಾಸಕರ ಗಮನಕ್ಕೆ ತಂದರು.

ಮನವಿಯ ಪ್ರಮುಖ ಬೇಡಿಕೆಗಳು:

  • ಕರಾವಳಿ ಭಾಗದಲ್ಲಿನ ನೊಣದ ಸಮಸ್ಯೆಗೆ ವೈಜ್ಞಾನಿಕ ಪರಿಹಾರ ಮತ್ತು ತ್ಯಾಜ್ಯ ನಿರ್ವಹಣಾ ಯೋಜನೆ ಜಾರಿ.
  • ಪ್ರತಿ 1 ಕೆ.ಜಿ.ಗೆ 10 ರೂಪಾಯಿಗಳ ಕನಿಷ್ಠ ಸಾಕಾಣಿಕಾ ವೆಚ್ಚದ (Growing charges) ಆದೇಶದ ಕಟ್ಟುನಿಟ್ಟಿನ ಅನುಷ್ಠಾನ.
  • ಪ್ರಕೃತಿ ವಿಕೋಪದಿಂದ ಉಂಟಾಗುವ ನಷ್ಟಗಳಿಗೆ ಸರ್ಕಾರಿ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವುದು.
  • ಕೋಳಿ ಫೀಡ್‌ನ ಗುಣಮಟ್ಟ ನಿಯಂತ್ರಣ ಮತ್ತು ಕಂಪೆನಿಗಳಿಂದ ರೈತರಿಗೆ ವಾರ್ಷಿಕ ಬೋನಸ್ ವ್ಯವಸ್ಥೆ.
  • ‘ಕರ್ನಾಟಕ ಕುಕ್ಕಟ ಅಭಿವೃದ್ಧಿ ನಿಯಂತ್ರಣ ಮಸೂದೆ 2023’ ರ ಅಂಗೀಕಾರ ಹಾಗೂ ಕೋಳಿ ಸಾಕಾಣಿಕೆಯನ್ನು ‘ಕೃಷಿ ಚಟುವಟಿಕೆ’ ಎಂದು ಪರಿಗಣಿಸುವ ಕಾನೂನು ತಿದ್ದುಪಡಿ.
  • ಕೋಳಿ ಶೆಡ್‌ಗಳಿಗೆ ರಿಯಾಯಿತಿ ದರದ ವಿದ್ಯುತ್ ಪೂರೈಕೆ ಹಾಗೂ ರೇಷ್ಮೆ ಇಲಾಖೆಯ ಮಾದರಿಯಲ್ಲಿ ಸಹಾಯಧನ ಮತ್ತು ಸೌಲಭ್ಯಗಳ ಒದಗಿಸುವಿಕೆ.
  • ಸುಲಭ ಬಡ್ಡಿ ದರದ ಸಾಲ ಸೌಲಭ್ಯ, ಆಧುನಿಕ ಉಪಕರಣಗಳ ಖರೀದಿಗೆ 90% ಸಹಾಯಧನ ಮತ್ತು ಸಮಗ್ರ ವಿಮಾ ಯೋಜನೆ ಜಾರಿ.

ಶಾಸಕ ಹರೀಶ್ ಪೂಂಜಾರವರು ಮನವಿಯನ್ನು ಸ್ವೀಕರಿಸಿ, ಕೋಳಿ ಸಾಕಾಣಿಕೆ ರೈತರ ಕಷ್ಟಗಳಿಗೆ ಸ್ಪಂದಿಸುವ ಭರವಸೆ ನೀಡಿದರು. ಈ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು, ರೈತರ ಹಿತದೃಷ್ಟಿಯಿಂದ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲು ಪ್ರಯತ್ನಿಸುವುದಾಗಿ ಅವರು ತಿಳಿಸಿದ್ದಾರೆ.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!