August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಧರ್ಮಸ್ಥಳ: ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಭಾರತೀಯ ಸೇನೆಯ ಮಾಜಿ ಸೈನಿಕರು, ಕರ್ನಾಟಕ ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯ ಅಧಿಕಾರಿ ಜಯಕುಮಾರ್ ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಜೊತೆಗೆ ಸ್ವಾತಂತ್ರ್ಯ ಹೋರಾಟ ವೀರರ ತ್ಯಾಗ ಹಾಗೂ ಅವರಿಂದ ಅಳವಡಿಸಿಕೊಳ್ಳಬೇಕಾದ ಗುಣಗಳನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಮುಖ್ಯ ಅತಿಥಿ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಹಾಗೂ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ನಿವೃತ್ತ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸೋಮಶೇಖರ್ ಬಿ ಶೆಟ್ಟಿ ಮಾತನಾಡುತ್ತಾ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳ ಅಗತ್ಯ ಅದರ ಒಳನೋಟಗಳು ಹಾಗೂ ಅದರ ಇತ್ತೀಚಿನ ಅಗತ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.ಇನ್ನೊಬ್ಬರಿಗೆ ಕೊಡುವ ಗುಣ ನಮಗೆ ಇರಬೇಕು.ಸಂಸ್ಕಾರ ಜೀವನ ರೂಪಿಸುತ್ತದೆ. ವಿದ್ಯಾವಂತರು ಹೃದಯವಂತರಾಗಬೇಕು ಎಂಬಿತ್ಯಾದಿ ವಿಚಾರಗಳನ್ನು ಉದಾಹರಣೆಯೊಂದಿಗೆ ವಿವರಿಸಿದರು.

ದೇಶಪ್ರೇಮವನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಅವರ ಮಾರ್ಗದರ್ಶನದೊಂದಿಗೆ ಮೂಡಿ ಬಂದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಅಲ್ಬಿನ ಕಾರ್ಯಕ್ರಮ ನಿರ್ವಹಿಸಿ, ಜಸೀನಾ ಸ್ವಾಗತಿಸಿ, ಅಮೀತ್ ಅತಿಥಿಗಳ ಕಿರು ಪರಿಚಯ ಮಾಡಿದರು. ತನುಶ್ರೀ ಧನ್ಯವಾದ ಇತ್ತರು. ಶಾಲೆಯ ಶಿಕ್ಷಕ ಶಿಕ್ಷಕೇತರ ವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

Suddi Udaya

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya
error: Content is protected !!