August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ನವೋದಯ ಯುವಕ ಮಂಡಲ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ: ವಿದ್ಯಾರ್ಥಿಗಳಿಗೆ “ಅಕ್ಷರ ದೀವಿಗೆ” ಹಾಗೂ ಶಿಕ್ಷಕರಿಗೆ ಗೌರವ

ನಾವೂರು: 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಅಂಗವಾಗಿ ನಾವೂರು ನವೋದಯ ಯುವಕ ಮಂಡಲ ವತಿಯಿಂದ ವಿದ್ಯಾರ್ಥಿಗಳ ಅಕ್ಷರ ಪಯಣಕ್ಕೆ ಪ್ರೋತ್ಸಾಹ ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮತ್ತು ಸಿಬ್ಬಂದಿಗೆ ಗೌರವ ಸಲ್ಲಿಸುವ ವಿಶಿಷ್ಟ ಕಾರ್ಯಕ್ರಮವು ಜರುಗಿತು.

ನಾವೂರು ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ಹಾಗೂ ಜ್ಞಾನಾರ್ಜನೆಗೆ ಆಸರೆಯಾಗುವ ದಿಸೆಯಲ್ಲಿ “ಅಕ್ಷರ ದೀವಿಗೆ’ (ಜ್ಞಾನದ ಲೇಖನಿ)ಯನ್ನು ವಿತರಿಸಲಾಯಿತು.

ಇದರೊಂದಿಗೆ, ನಾಳಿನ ಪ್ರಜೆಗಳನ್ನು ರೂಪಿಸುವ ಜ್ಞಾನದಾತರಾದ ಶಿಕ್ಷಕ ವೃಂದದವರಿಗೆ ಹಾಗೂ ಮಕ್ಕಳಿಗೆ ನಿತ್ಯ ಅನ್ನದಾಸೋಹ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿಯವರಿಗೆ ವಿಶೇಷ ಗೌರವಪೂರ್ವಕವಾಗಿ ಲೇಖನಿಯನ್ನು ಕೊಡುಗೆಯಾಗಿ ನೀಡಿ ಗೌರವಿಸಲಾಯಿತು.

ಮಕ್ಕಳ ಬರವಣಿಗೆಗೆ ಬೆಳಕಾಗುವ ಮತ್ತು ಸಾಧನೆಯ ಹಾದಿಗೆ ಸ್ಫೂರ್ತಿಯಾಗುವ ಈ ವಿನೂತನ ‘ಅಕ್ಷರ ಕೊಡುಗೆ ಕಾರ್ಯಕ್ರಮದಲ್ಲಿ ನವೋದಯ ಯುವಕ ಮಂಡಲದ ಅಧ್ಯಕ್ಷ ಸ್ವರೂಪ್ ಶೇಖರ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಗೌಡ ನಾಗಾಜೆ, ಕೋಶಾಧಿಕಾರಿ ಬಾಲಕೃಷ್ಣ ಆಚಾರಿ, ಪ್ರೌಢಶಾಲೆ ಮುಖ್ಯ ಶಿಕ್ಷಕ ರಾಜೇಂದ್ರ, ಶಾಲೆಯ ಮುಖ್ಯ ಶಿಕ್ಷಕರಾದ ಅಮಿತಾ , ಎಸ್.ಡಿ.ಎಂ.ಸಿ ಅಧ್ಯಕ್ಷ ಡಾ.ಪ್ರದೀಪ್ ಬಂಗಾಡಿ, ಸಿ.ಎ. ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಸಾಲಿಯಾನ್ ಮೊರ್ತಜೆ ಹಾಗೂ ಯುವಕ ಮಂಡಲದ ಎಲ್ಲಾ ಪದಾಧಿಕಾರಿಗಳು, ಸಮಿತಿಯ ಸದಸ್ಯರು ಮತ್ತು ಊರಿನ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!