August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಸರಕಾರಿ ‌ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪಡಂಗಡಿ: ಸರಕಾರಿ ‌ಪ್ರೌಢಶಾಲೆ ಪಡಂಗಡಿ ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಪಡಂಗಡಿಯ ನಿಕಟ ಪೂರ್ವ ಉಪಾಧ್ಯಕ್ಷೆ ಶ್ರೀಮತಿ ವಸಂತಿ ಪಿ. ಎನ್ ಧ್ವಜಾರೋಹಣವನ್ನು ನೆರವೇರಿಸಿದರು. ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆನರಾ ಬ್ಯಾಂಕ್ ಗುರುವಾಯನಕೆರೆ ಇಲ್ಲಿನ ವ್ಯವಸ್ಥಾಪಕ ರಾಜಶೇಖರ್ ಅವರು ಡಿಜಿಟಲ್ ಭಾರತದ ಅಭಿವೃದ್ಧಿಯ ಕುರಿತು ತಿಳಿಸಿದರು.

ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಪೀಟರ್ ಮೋನಿಸ್ ಅವರು ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಅನ್ನಮ್ಮ ವಿ.ಎಂ. ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕೆನರಾ ಬ್ಯಾಂಕ್ ವತಿಯಿಂದ ಕಳೆದ ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.

ಬಹುಮಾನಗಳ ಪಟ್ಟಿಯನ್ನು ಹಾಸಿರ್ ಓದಿದರು. ಮಹಮ್ಮದ್ ಶಾನಿಫ್ ಸ್ವಾಗತಿಸಿದರು. ಶೈನಿತ್ ವಂದಿಸಿದರು. ಫಾತಿಮಾ ಶನಾ , ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಪಂಚಾಯತ್ ಪಡಂಗಡಿ ಹಾಗೂ ಸ್ಥಳೀಯ ವಿದ್ಯಾಭಿಮಾನಿಗಳು ಆಗಿರುವ ಉಸ್ಮಾನ್ ಅವರು ನೀಡಿದ ಸಿಹಿ ತಿಂಡಿಗಳನ್ನು ವಿತರಿಸಲಾಯಿತು. ಶಾಲಾ ಎಸ್‌ಡಿಎಂಸಿ ಸದಸ್ಯರು, ಶಾಲಾ ನಾಯಕ ಸಂಪ್ರೀತ್ ಹಾಗೂ ಪೋಷಕರು ಶಿಕ್ಷಕರು ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya

ಜ.4: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ಆಶ್ರಯದಲ್ಲಿ 15ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya
error: Content is protected !!