August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದ್ರಿಯಾ ಜುಮ್ಮಾ ಮಸ್ಜಿದ್ ಉಜಿರೆ ಟೌನ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಉಜಿರೆ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬದ್ರಿಯಾ ಜುಮ್ಮಾ ಮಸ್ಜಿದ್, ಉಜಿರೆ ಟೌನ್ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮವು ಜಮಾಅತ್ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಅವರ ನೇತೃತ್ವದಲ್ಲಿ ಹಾಗೂ ಗೌರವಾಧ್ಯಕ್ಷ ಎಸ್.ಎಂ. ಕೋಯಾ ತಂಙಳ್ ಮತ್ತು ಯಂಗ್‌ಮೆನ್ಸ್ ಅಧ್ಯಕ್ಷ ಝೈನುದ್ದೀನ್ ತಂಙಳ್ ಅವರ ಮಾರ್ಗದರ್ಶನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ಪದಾಧಿಕಾರಿಗಳು, ಜಮಾಅತ್ ಸದಸ್ಯರು, ಊರಿನ ಹಿರಿಯರು, ಯುವಕರು, ಆಹ್ವಾನವನ್ನು ಸ್ವೀಕರಿಸಿ ಆಗಮಿಸಿದ ಗಣ್ಯ ಅತಿಥಿಗಳು, ಮದರಸ ಅಧ್ಯಾಪಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಸೀದಿಯ ಖತೀಬ್ ಇಸ್ಮಾಯಿಲ್ ಹನೀಫಿ ನಚ್ಚಬೆಟ್ಟು ಉಸ್ತಾದ್, ಸ್ವಾತಂತ್ರ್ಯದ ಮಹತ್ವ, ದೇಶದ ಏಕತೆ, ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಅಗತ್ಯತೆಯ ಕುರಿತು ಸಂದೇಶ ನೀಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿ, ದೇಶದ ಪ್ರಗತಿ ಮತ್ತು ಸಮುದಾಯದ ಸೌಹಾರ್ದತೆಗಾಗಿ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಕೊನೆಯಲ್ಲಿ ಆಗಮಿಸಿದ ಗಣ್ಯ ಅತಿಥಿಗಳು, ಜಮಾಅತ್ ಸದಸ್ಯರು, ಆಡಳಿತ ಸಮಿತಿಯ ಪದಾಧಿಕಾರಿಗಳು, ಮದರಸ ಅಧ್ಯಾಪಕರು, ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ಸಲ್ಲಿಸಲಾಯಿತು.

ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಆಡಳಿತ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಜಮಾಅತ್ ಸದಸ್ಯರು, ಹಿರಿಯರು, ಯುವಕರು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು.

Related posts

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya
error: Content is protected !!