
ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಮತ್ತು ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವತಿಯಿಂದ ದೇಶದ 80ನೇ ಸ್ವಾತಂತ್ರೋತ್ಸವ ಆಚರಣೆಯು ಬೆಳ್ತಂಗಡಿ ರಕ್ಷಾ ಆರ್ಕೆಡ್ ಆವರಣದಲ್ಲಿ ಜರುಗಿತು.

ನಿವೃತ್ತ ಯೋಧರಾದ ದಿನೇಶ್ ಗೌಡ ಕೆ. ಕಲಾಯಿತೊಟ್ಟು ಅವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.


ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲ್ಸ್ ನ ವ್ಯವಸ್ಥಾಪಕರಾದ ಲೋಹಿತ್ ಕುಮಾರ್, ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್ ಬಳಂಜ, ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯ ಮಾಲಕ ಅಲ್ಫೋನ್ಸ್ ಫ್ರಾಂಕೋ, ಅಮರ್ ಡ್ರಗ್ ಹೌಸ್ ನ ಮಾಲಕರಾದ ಗಣಪತಿ ಭಟ್, ಮುಳಿಯ ಉಪ ವ್ಯವಸ್ಥಾಪಕ ಸುಧೀರ್ ಸುವರ್ಣ ,ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಹಾಗೂ ಸುದ್ದಿ ಉದಯ ವಾರಪತ್ರಿಕೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.












