ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ವಲಯದ ಮಾಜಿ ಅಧ್ಯಕ್ಷ ಅಶೋಕ್ ಆಚಾರ್ಯ ನಾವೂರ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷರಾದ ರವಿ ಪೂಜಾರಿ ನಾರಾವಿ, ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ವಲಯದ ಮಾಜಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು












