August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ‘ಸ್ವಾತಂತ್ರ್ಯ ಹೋರಾಟಗಾರರ ಋಣ ನಮ್ಮೆಲ್ಲರ ಮೇಲಿದೆ. ಅವರ ಕನಸನ್ನು ನನಸು ಮಾಡುವ ಕಡೆಗೆ ನಮ್ಮ ನಿರಂತರ ಪ್ರಯತ್ನ ಇರಬೇಕಾಗಿದೆ. ನಮ್ಮ ಪ್ರಜಾಪ್ರಭುತ್ವದ ರಕ್ಷಣೆಗೆ ನಾವು ಸದಾ ಸಿದ್ಧರಾಗಿರಬೇಕು’ ಎಂದು ವಕೀಲ ಬಿ.ಎಂ.ಭಟ್ ಹೇಳಿದರು.

ಅವರು ಬೆಳ್ತಂಗಡಿ ಶ್ರೀ ಗುರುದೇವ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಶ್ರೀ ಗುರುದೇವ ವಿದ್ಯಾಸಂಸ್ಥೆಯ ಸ್ಥಾಪಕರಾದ ಕೀರ್ತಿಶೇಷ ವಸಂತ ಬಂಗೇರರು ಮರೆಯಲಾಗದ ಮಾಣಿಕ್ಯ. ನಿಜವಾದ ಸ್ವಾತಂತ್ರ್ಯವನ್ನು ಅವರು ಜನ ಸಾಮಾನ್ಯರ ಪಾಲಿಗೆ ನಿರಂತರವಾಗಿ ನೀಡುವ ಕಡೆಗೆ ಅವಿರತ ಹೋರಾಟವನ್ನು ಮಾಡುತ್ತಾ ಬಂದವರಾಗಿದ್ದರು ಎಂದ ಅವರು ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ನಮ್ಮ ವಿಚಾರಗಳಾಗಲಿ ಎಂದು ಕರೆ ನೀಡಿದರು.

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ದ್ವಿತೀಯ ಬಿ.ಸಿ. ಎ.ವಿದ್ಯಾರ್ಥಿನಿ ಸ್ವಾತಿ, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಪ್ರಸ್ತಾವಿಸಿದರು. ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಸೌಜನ್ಯ ಪರಿಚಯಿಸಿ, ಗಣಕವಿಜ್ಞಾನ ವಿಭಾಗದ ಉಪನ್ಯಾಸಕಿ ಶುಭಲಕ್ಷ್ಮಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಪ್ರಥಮ ದರ್ಜೆ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಸತೀಶ್ ಸಾಲಿಯಾನ್ ವಂದಿಸಿದರು.

Related posts

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ

Suddi Udaya

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya
error: Content is protected !!