August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದೇಮುಗೇರು ಅಂಗನವಾಡಿಯಲ್ಲಿ 80ನೇ ವರ್ಷದ ಸ್ವಾತ್ರಂತ್ರೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತು ವ್ಯಾಪ್ತಿಯ ಸುದೇಮುಗೇರು ಅಂಗನವಾಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ. ನೆರವೇರಿಸಿದರು.

ನಂತರ ನಡೆದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು. ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್, ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಪ್ರಸಾದ್ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಪ.ಪಂ. ಮಾಜಿ ಹಿರಿಯ ಸದಸ್ಯ ಹಾಗೂ ಕೆಡಿಪಿ ಸದಸ್ಯರಾದ ಜಗದೀಶ್ ಡಿ. ವಹಿಸಿದ್ದರು.

ವೇದಿಕೆಯಲ್ಲಿ ಅಂಗನವಾಡಿ ಅಧ್ಯಕ್ಷೆ ನಾಝ್‌ಮಿನ್, ಅಂಗನವಾಡಿ ಶಿಕ್ಷಕಿ ಶ್ರೀಮತಿ ದಿವ್ಯಾ ಶೇಖರ್, ಸಹಾಯಕಿ ಶ್ರೀಮತಿ ರೋಹಿಣಿ ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕ್ರೀಡಾ ಕೂಟದ ಸಂಯೋಜಕ ಮಹೇಶ್, ಸಹಾಯಕ ಹಕೀಂ, ಸಹಕಾರ ನೀಡಿದ ಮೋನಿಕಾ ಇವರನ್ನು ಗೌರವಿಸಲಾಯಿತು. ಮೋನಿಕಾ ಪ್ರಾರ್ಥನೆ ಹಾಡಿದರು. ಜಿ.ಪಂ ನೀರು ಸರಬರಾಜು ಇಲಾಖೆಯ ಸಿಬ್ಬಂದಿ ಅಶೋಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya
error: Content is protected !!