August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ 80 ನೇ ಸ್ವಾತಂತ್ರ್ಯ ಸಂಭ್ರಮಾಚರಣೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಅಂಗಳವು 150 ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ‘ವಂದೇ ಮಾತರಂ’ ಮಾಧುರ್ಯ, ‘2047ರ ವಿಕಸಿತ ಭಾರತಕ್ಕಾಗಿ ಯುವಶಕ್ತಿ’ ಧ್ಯೇಯ ಹಾಗೂ ರಾಷ್ಟ್ರಗೀತೆಯ ನಿನಾದದೊಂದಿಗೆ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ ಸಾಕ್ಷಿಯಾಯಿತು.

ಎಸ್.ಡಿ.ಎಂ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಸಂಸ್ಥೆಯ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಕಾಲೇಜಿನ ಶೈಕ್ಷಣಿಕ ಸಂಯೋಜನಾಧಿಕಾರಿ ಎಸ್.ಎನ್. ಕಾಕತ್ಕರ್ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ., ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ಸೌಮ್ಯ ಬಿ.ಪಿ. ಹಾಗೂ ಉಪ ಪ್ರಾಂಶುಪಾಲರಾದ ನಂದಕುಮಾರಿ ಕೆ.ಪಿ. ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಜಿ.ಆರ್. ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. ಎನ್.ಎಸ್.ಎಸ್ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಸಿಹಿ ವಿತರಿಸಿದರು.

Related posts

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ ವಿಳಂಬ: ದೇವಸ್ಥಾನ ದೈನಂದಿನ ಪೂಜಾ ಕಾರ್ಯ ಹಾಗೂ ವಾರ್ಷಿಕ ಆಚರಣೆಗಳಿಗೆ ತೀವ್ರ ಅಡಚಣೆ: ಮಳೆಯಿಂದ ದೇವಾಲಯದ ತಡೆಗೋಡೆ ಕುಸಿದು ದೇವಾಲಯದ ಒಳಗೆ ಕೆಸರುಮಯವಾದರೂ ಕೇಳುವವರಿಲ್ಲ: ಭಕ್ತರ ತೀವ್ರ ಅಕ್ರೋಶ, ದೇವಸ್ಥಾನದಲ್ಲಿ ಧರಣಿ ನಡೆಸುವ ಎಚ್ಚರಿಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya
error: Content is protected !!