August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ ಧರ್ಮಸ್ಥಳ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಸದಾನಂದ ಮುಂಡಾಜೆ, ನಿವೃತ್ತ ಎಸ್.ಡಿ.ಎಂ ಕಾಲೇಜಿನ ಸಿಬ್ಬಂದಿ ಕಾರ್ಯಕ್ರಮದ ಉದ್ಘಾಟನೆಯನ್ನು ಕಳಸಕ್ಕೆ ಅಕ್ಕಿಹಾಕಿ ಹಿಂಗಾರವನ್ನು ಬಿಡಿಸಿ ದೀಪ ಬೆಳಗಿಸಿ ಚೆನ್ನಮನೆ ಆಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಟಿ ವಿಶೇಷತೆಯ ಬಗ್ಗೆ ಮಾತನಾಡಿದರು. ಹಿರಿಯರು ಮಾಡಿಕೊಂಡು ಬಂದ ಆಚರಣೆಯ ಬಗ್ಗೆ ಮಕ್ಕಳಿಗೆ ತಿಳಿಸಿದರು.

ಹಿರಿಯರ ಕಾಲದಲ್ಲಿ ಆಟಿ ತಿಂಗಳ ಎಂದರೆ ಅದು ಕಷ್ಟದ ಸಮಯ., ರೋಗರುಜಿನಗಳನ್ನು ಹೊಡೆದೋಡಿಸಲು ಮನೆ ಮನೆಗೆ ಆಟಿಕಲೆಂಜ ಬರುತ್ತಾನೆ ಎಂದು ಹೇಳಿದರು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಇವರು ಆಟಿ ವಿಶೇಷತೆ ಬಗ್ಗೆ ಮಕ್ಕಳಿಗೆ ತಿಳಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ನಾಯ್ಕ್ ಆಟಿ ತಿಂಗಳ ಬಗ್ಗೆ ಮಕ್ಕಳಿಗೆ ತಿಳಿಸಿದರು. ಆಟಿ ತಿಂಗಳ ಪರಿಕರಗಳನ್ನು ಪ್ರದರ್ಶಿಸಲಾಯಿತು. ವಿದ್ಯಾರ್ಥಿಯು ಆಟಿ ಕಲೆಂಜದ ಪ್ರದರ್ಶನ ಮಾಡಿದರು.. ಸುಮಾರು 20 ಬಗೆಯ ಆಟಿ ತಿಂಗಳ ಸಾಂಪ್ರದಾಯಿಕ ತಿಂಡಿಗಳನ್ನು ಮಕ್ಕಳಿಗೆ ಮತ್ತು ಬಂದವರಿಗೆ ವಿತರಿಸಲಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ಕೂಸಪ್ಪ , ಶಿಕ್ಷಕಿಯಾದ ಜ್ಯೋತಿವರು ಸ್ವಾಗತಿಸಿದರು. ಶಿಕ್ಷಕಿ ಸುಜಾತ ಧನ್ಯವಾದ ಮಾಡಿದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

Suddi Udaya

ಶಿಶಿಲ: ಹೇವಾಜೆ ಶಾಲೆಯ ಹಿಂಬದಿ ಗುಡ್ಡ ಜರಿತ

Suddi Udaya

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ಉಜಿರೆ ಶ್ರೀ ಜನಾರ್ದನಸ್ವಾಮಿ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya
error: Content is protected !!