August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್‌ನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಶೈಕ್ಷಣಿಕ ಸಾಧಕರಿಗೆ ಸನ್ಮಾನ

ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಆ.15 ರಂದು ಅರಮಲೆಬೆಟ್ಟು ಕ್ಯಾಂಪಸ್‌ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಭಾರತದ ಭವಿಷ್ಯ ರೂಪಿಸುವಲ್ಲಿ ಇಂದಿನ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಹೆತ್ತವರಿಗೆ ದೊಡ್ಡ ಆಸ್ತಿಯಾಗಿ, ದೇಶಕ್ಕೆ ಹೆಮ್ಮೆಯಾಗುವ ರೀತಿಯಲ್ಲಿ ಸಾಧನೆ ಮಾಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಜೀವನದ ಸಾಧನೆಗೆ ಎಕ್ಸೆಲ್ ಸದಾ ದಾರಿದೀಪವಾಗಿ ನಿಂತಿರುತ್ತದೆ ಎಂದು ಹೇಳಿದರು.

ಭಾರತೀಯ ಸೇನೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿರುವ ಮೇ. ಡಾ. ಕುಶ್ವಂತ್ ಕೆ.ಎನ್. ಧ್ವಜಾರೋಹಣ ನೆರವೇರಿಸಿ, ಬಳಿಕ ನೀಟ್ ಸಾಧಕರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಂಟಿ ಕಾರ್ಯದರ್ಶಿ ವಿಠಲ ಎ., ಅರಮಲೆಬೆಟ್ಟು ಕ್ಯಾಂಪಸ್ ಪ್ರಾಂಶುಪಾಲ ಡಾ. ಪ್ರಜ್ವಲ್ ಕಜೆ, ವಿದ್ಯಾಸಾಗರ ಕ್ಯಾಂಪಸ್ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾಂಶುಪಾಲ ಸುಮಿತ್ರಾ ಗೌಡ ಹಾಗೂ ವೇಣೂರು ಟೆಕ್ನೋ ಸ್ಕೂಲ್ ಮುಖ್ಯೋಪಾಧ್ಯಾಯ ಶಾಂತಿರಾಜ್ ಜೈನ್ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ‘ಗೆಜ್ಜೆ ಹೆಜ್ಜೆ–ನೃತ್ಯ ವೈಭವ’ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾಂಶುಪಾಲ ಸುಮಿತ್ರಾ ಗೌಡ ವಂದಿಸಿದರು.

Related posts

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya
error: Content is protected !!