August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ, ಲಾಯಿಲ, ನಾವೂರು, ಚಾರ್ಮಾಡಿ, ಕುಂಟಿನಿ, ಕಕ್ಕೇಜಾಲ್, ಸುನ್ನತ್‌ಕೆರೆ, ಮದ್ದಡ್ಕ, ಕನ್ನಡಿಕಟ್ಟೆ, ಕಲ್ಲೇರಿ ಹಾಗೂ ಪುಂಜಾಲಕಟ್ಟೆ ಸೇರಿದಂತೆ ಕ್ಷೇತ್ರದ ವಿವಿಧ ಭಾಗಗಳಲ್ಲಿ ಪಕ್ಷದ ವತಿಯಿಂದ ಧ್ವಜಾರೋಹಣ ನೆರವೇರಿಸಲಾಯಿತು.
“ಸ್ವಾತಂತ್ರ್ಯ ಎಲ್ಲರ ಹಕ್ಕು; ವಿಚಾರಣಾಧೀನರಿಗೂ ಅದೇ ಹಕ್ಕು” ಎಂಬ ಸಂದೇಶದೊಂದಿಗೆ ನಡೆದ ಕಾರ್ಯಕ್ರಮಗಳಲ್ಲಿ ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನಬದ್ಧ ಹಕ್ಕುಗಳು ಹಾಗೂ ಸಮಾನತೆಯ ಮಹತ್ವವನ್ನು ಸಾರಲಾಯಿತು.

ಕಾರ್ಯಕ್ರಮಗಳಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ತ್ವಾಹಿರ್ ಬಂಗೇರಕಟ್ಟೆ, ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸಾಲಿಹ್ ಮದ್ದಡ್ಕ, ಸದಸ್ಯರಾದ ಮುಸ್ತಫಾ ಜಿ.ಕೆ., ಖಾದರ್ ನಾವೂರು, ಅಶ್ರಫ್ ಕಟ್ಟೆ ಸೇರಿದಂತೆ ಬ್ಲಾಕ್ ಹಾಗೂ ಬ್ರಾಂಚ್ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Related posts

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಗ್ನೀವೀರ್ ರಂಜಿತ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya
error: Content is protected !!