August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನೋಡಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

ಲಾಯಿಲ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕರ್ನೋಡಿ 80 ನೇ ಸ್ವಾತಂತ್ರೋತ್ಸವ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಮಕ್ಕಳು ಮತ್ತು ಪೋಷಕರು ಮೆರವಣಿಗೆಯ ಮೂಲಕ ಲಾಯಿಲ ಭಗತ್ ಸಿಂಗ್ ವೃತ್ತಕ್ಕೆ ತೆರಳಿ ಶಾಲೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಧ್ವಜಾರೋಹಣವನ್ನು ಭಾರತೀಯ ಸೇನೆಯಲ್ಲಿ 22 ವರುಷ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಸೈನಿಕ ಅಶೋಕ್ ಕುಮಾರ್ ವಿವೇಕಾನಂದ ನಗರ ಲಾಯಿಲ ಇವರು ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷೆ ಶ್ರೀಮತಿ ಸೌಮ್ಯ ವಹಿಸಿದರು.

ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನಿಕರಾದ ಅಶೋಕ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಕಾರ್ಯದರ್ಶಿ ಗಣೇಶ್ ಆರ್, ನಿವೃತ ಶಿಕ್ಷಕಿ ಶ್ರೀಮತಿ ಸೆಲಿನ್ ಮಸ್ಕರೇನಸ್, ಶಾಲೆಯಲ್ಲಿ 20 ವರುಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶ್ರೀಮತಿ ಗಂಗಾರಾಣಿ ನಾ ಜೋಷಿ, ಶಾಲಾ ಮುಖ್ಯೋಪಾಧ್ಯಾಯರಾದ ಜಗನ್ನಾಥ. ಎಂ ಭಾಗವಹಿಸಿದರು.

ಸ್ವಾತಂತ್ರೋತ್ಸವದ ಪ್ರಯುಕ್ತ L.K.G – U.K.G ಮಕ್ಕಳ ಸಹಿತ ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಜಗನ್ನಾಥ್. ಎಂ ಇವರ ವತಿಯಿಂದ ಶಾಲಾ ಮಕ್ಕಳಿಗೆ 45,000 ಸಾವಿರ ಮೌಲ್ಯದ ಸಮವಸ್ತ್ರವನ್ನು ಶಾಲಾ ಮಕ್ಕಳಿಗೆ ಅತಿಥಿಗಳ ಸಮುಖದಲ್ಲಿ ನೀಡಲಾಯಿತು.

ಶಾಲಾ ಹಳೆ ವಿದ್ಯಾರ್ಥಿ ಸಂಘ ಮತ್ತು ನಿವೃತ್ತ ಶಿಕ್ಷಕಿ ಶ್ರೀಮತಿ ಸೆಲಿನ್ ಮಸ್ಕರೇನಸ್ ಬಹುಮಾನದ ಪ್ರಾಯೋಜಕತ್ವ ವಹಿಸಿದರು. ಮುಖ್ಯ ಶಿಕ್ಷಕರಾದ ಜಗನ್ನಾಥ. ಎಂ ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಉಷಾ ಕಾರ್ಯಕ್ರಮವನ್ನು ನಿರೂಪಿಸಿದರು ,ಸಹ ಶಿಕ್ಷಕ ಕೃಷ್ಣ ಕುಮಾರ್ ಧನ್ಯವಾದಗೈದರು. ಅಥಿತಿ ಶಿಕ್ಷಕಿಯರಾದ, ಶ್ರೀಮತಿ ಸುಪ್ರಿಯಾ , ಶ್ರೀಮತಿ ಚಂದ್ರಾವತಿ.ಕೆ, ಶ್ರೀಮತಿ ಸುಮಿತ್ರಾ , ಶ್ರೀಮತಿ ಕೋಮಲ ಸಹಾಯಕಿ ಶ್ರೀಮತಿ ಸುಮಲತಾ ಇವರು ಸಹಕರಿಸಿದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪೋಷಕರು, ಮತ್ತು ವಿದ್ಯಾಭಿಮಾನಿಗಳು ಭಾಗವಹಿಸಿದರು.

Related posts

ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya
error: Content is protected !!