August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ.) (CBK) ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ. 15ರಂದು ಸಿಬಿಕೆ ಕಚೇರಿಯಲ್ಲಿ ಗೌರವಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಗಸ್ಟೀನ್ ಟಿ. ಎ. ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿ , ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ದೇಶದ ಏಕತೆ, ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಸಮಾಜಮುಖಿ ಸೇವಾ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಸಂಘದ ಕಾರ್ಯದರ್ಶಿ ಶಿಜೋ ಜೋಸೆಫ್ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು.

ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿ. ಟಿ. ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಸ್ವಾತಂತ್ರ್ಯದ ಮಹತ್ವವನ್ನು ಅರಿತು ದೇಶದ ಏಕತೆ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಗೌರವ ಸಲಹೆಗಾರರಾದ ಜೋಸೆಫ್ ಕೆ. ಡಿ. ಅವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ, ದೇಶದ ಪ್ರಗತಿಗೆ ಯುವಜನರು ಹಾಗೂ ಸಮಾಜದ ಪ್ರತಿಯೊಬ್ಬರೂ ಸಕಾರಾತ್ಮಕವಾಗಿ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೋಶಾಧಿಕಾರಿ ರಂಜಿತ್ ಪಿ. ಎಸ್., ಕಾರ್ಯಕಾರಿಣಿ ಸಮಿತಿ ಸದಸ್ಯರು ಹಾಗೂ ಸಿಬಿಕೆ ಸದಸ್ಯರು ಉಪಸ್ಥಿತರಿದ್ದರು.

Related posts

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಪಿ.ಎಂ.ಶ್ರೀ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya
error: Content is protected !!