August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಪೊಸೋಳಿಕೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಧರ್ಮಸ್ಥಳ : ಇಲ್ಲಿಯ ಚಂದ್ರಗಿರಿ ನಗರ ಪೊಸೋಳಿಕೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣದ ಮೂಲಕ ಮಾಜಿ ಸೈನಿಕ ರವಿಪ್ರಸಾದ್ ರವರು ನೆರವೇರಿಸಿದರು.

ಸಭಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿದ ರವಿಪ್ರಸಾದ್ ರವರು ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ತಿಳಿಸಿದರು. ನಂತರ ಬಾಲ ವಿಕಾಸ ಸಮಿತಿ ವತಿಯಿಂದ ಗೌರವಿಸಲಾಯಿತು.

ಬಾಲ ವಿಕಾಸ ಸಮಿತಿಯ ಗೌರವ ಸಲಹೆಗಾರರಾದ ಸಾಂಸ್ಕೃತಿಕ ಸಂಘಟಕರಾದ ಬಿ, ಭುಜಬಲಿ, ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಸವಿತಾ ಮಂಜುನಾಥ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಶರ್ಮಿಳ ಹರ್ಷ, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ರೇವತಿ, ಮುಖ್ಯ ಸಲಹೆಗಾರ ಸುರೇಶ ಗೌಡ , ಪ್ರವೀಣ್ ದೇವಾಡಿಗ, ಸುಭಾಷ್ ಚಂದ್ರ ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಸಂಧ್ಯಾರವರು ದೇಶಭಕ್ತಿ ಗೀತೆ ಹಾಡಿದರು. ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹರ್ಷ ಜೈನ್ ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಮಾಡಿದರು. ಗ್ರಾಮ ಪಂಚಾಯತ್ ಮತ್ತು ಸುಭಾಷ್ ಚಂದ್ರ ಜೈನ್ ಚಂದ್ರಗಿರಿ ನಗರ ಇವರ ವತಿಯಿಂದ ಸಿಹಿತಿಂಡಿಯನ್ನು ಎಲ್ಲರಿಗೂ ನೀಡಿದರು.


ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರದ ಪುಟಾಣಿ ಮಕ್ಕಳು, ಶ್ರೀ ಶಕ್ತಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ಆಶಾ ಕಾರ್ಯಕರ್ತೆ ಶ್ರೀಮತಿ ಮಲ್ಲಿಕಾ, ಸಹಾಯಕಿ ಭಾಗ್ಯ, ಹಾಗೂ ಊರಿನ ಗಣ್ಯರು ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಅತಿಥಿಗಳನ್ನು ಅಂಗನವಾಡಿ ಕಾರ್ಯಕರ್ತೆ ಬಿಂದು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya
error: Content is protected !!