August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪಟ್ರಮೆ: ಗೆಳೆಯರ ಬಳಗದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಪಟ್ರಮೆಯ ದಲಿತ ಹಕ್ಕು ಸಮಿತಿ ಕಚೇರಿ ಅಂಬೆಡ್ಕರ್ ಭವನದ ಆವರಣದಲ್ಲಿ ಗೆಳೆಯರ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಹಿರಿಯರಾದ ಮಾಯಿಲ ನೆಕ್ಕರೆ ಧ್ವಜಾರೋಹಣಗೈದು, ಮಾತನಾಡಿ ಬ್ರಿಟೀಷರ ದಬ್ಬಾಳಿಕೆಗಳ ವಿರುದ್ದ ಸೆಟೆದು ನಿಂತು ಸುಂದರ ಸಮೃದ್ದಿಯ ಸಮತೆಯ ಭಾರತದ ಕನಸು ಹೊತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಾರತೀಯರು, ನಾಯಕತ್ವವಹಿಸಿದ ಗಾಂಧೀಜಿ, ಭಗತ್ ಸಿಂಗ್, ಸುಭಾಶ್ಚಂದ್ರ ಬೋಸ್, ಅಂಬೇಡ್ಕರ್ , ನೆಹರೂ ಮೊದಲಾದವರು ಕಂಡ ಭಾರತ ನಿರ್ಮಾಣದತ್ತ ನಾವು ಮುನ್ನಡೆಯಬೇಕಿದೆ. ಇದಕ್ಕಾಗಿ ಡಾ ಬಿ ಆರ್ ಅಂಬೆಡ್ಕರ್ ಒದಗಿಸಿಕೊಟ್ಟ ಶ್ರೇಷ್ಟ ಸಂವಿಧಾನದ ಪ್ರಕಾರ ನಾವೆಲ್ಲರೂ ಬದುಕಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ನ್ಯಾಯವಾದಿ ಹಾಗೂ ಕಾರ್ಮಿಕ ಮುಖಂಡರಾದ ಬಿ.ಯಂ. ಭಟ್, ಧನಂಜಯ, ಜಯಂತ, ವಿಶಾಲು, ರೋಹಿತ್ ನೆಕ್ಕರೆ, ಉಮೇಶ್ ಪಟ್ಟೂರು, ದೀಕ್ಷಿತ್ ಪಟ್ಟೂರು, ರೋಹಿತ್ ಪಟ್ಟೂರು, ಶ್ಯಾಮರಾಜ್, ಹಾರಿಸ್ ಪಟ್ರಮೆ,ವಿನುಶರಮಣ, ಷರೀಫ್, ಚೋಮ ಮೊದಲಾದವರು ಉಪಸ್ಥಿತರಿದ್ದರು. ವಸಂತ ಟೈಲರ್ ಸ್ವಾಗತಿಸಿ, ವಂದಿಸಿದರು.

Related posts

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya
error: Content is protected !!