ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಬೆಳ್ತಂಗಡಿ ಶಾಖೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಿರ್ದೇಶಕ ಮಂಜುನಾಥ ಆಚಾರ್ಯ ಧ್ವಜಾರೋಹಣ ಮಾಡುವುದರೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು .

ಈ ಸಂದರ್ಭದಲ್ಲಿ ವಿಶ್ವಕರ್ಮಾಭ್ಯುದಯ ಸಭಾ ಬೆಳ್ತಂಗಡಿ ಇದರ ಅಧ್ಯಕ್ಷರಾದ ಗಣೇಶ ಆಚಾರ್ಯ ಬಲ್ಯಾಯಕೋಡಿ, ಕಟ್ಟಡ ಮಾಲಕರಾದ ಮುಖೇಶ್ ಯೋಗೀಶ್ ಆರ್ ನಾಯಕ್, ಸದಸ್ಯರಾದ ಜಯರಾಮ ಆಚಾರ್ಯ ಅಚ್ಚಿನಡ್ಕ, ಶಾಖೆಯ ಪ್ರಭಾರ ಶಾಖಾ ವ್ಯವಸ್ಥಾಪಕರಾದ ಧನಂಜಯ ಆಚಾರ್ಯ, ಸಿಬ್ಬಂದಿಗಳಾದ ಸುಶಾಂತ್, ಯಜ್ಞೇಶ್ ಮತ್ತು ಜನತಾ ನಿಧಿ ಸಂಗ್ರಾಹಕರು, ಚಿನ್ನಾಭರಣ ಮೌಲ್ಯಮಾಪಕರು ಉಪಸ್ಥಿತರಿದ್ದರು












