ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯು ಸಂಘದ ಮುಖ್ಯ ಕಚೇರಿಯ ವಠಾರದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಜಿ ಭಿಡೆ ಯವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ವಿಶೇಷ ಅಧಿಕಾರಿ ರಾಜು ಶೆಟ್ಟಿ, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ ಎಸ್ ಹಾಗೂ ಸಂಘದ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.













