ವೇಣೂರು : ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ಈ ದಿನ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
80ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣವನ್ನು ಶಾಲೆಯ ಉಪ ಪ್ರಾಂಶುಪಾಲರಾದ ವೆಂಕಟೇಶ ಎಸ್ ತುಳುಪುಳೆ ನೆರವೇರಿಸಿ ಸಂದರ್ಭೋಚಿತವಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಎಸ್. ಡಿ. ಎಂ. ಸಿ ಯ ಕಾರ್ಯಾಧ್ಯಕ್ಷ ರಾಜೇಶ್ ಪೂಜಾರಿ ಮೂಡು ಕೋಡಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಶುಭ ಸಂದೇಶವನ್ನು ನೀಡಿದರು. ಪ್ರತಿಭಾನ್ವಿತ ವಿದ್ಯಾರ್ಥಿನಿ ಅಭಿಜ್ಞಾ ಮೊಯ್ಲಿ ಇವರಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ಲೋಕಯ್ಯ .ಎನ್ ಸ್ವಾಗತಿಸಿದರು. ಶಿಕ್ಷಕ ನೆಲ್ಸನ್ ಹೆರಾಲ್ಡ್ ವಂದಿಸಿದರು. ಕನ್ನಡ ಭಾಷಾ ಶಿಕ್ಷಕ ರವೀಂದ್ರ ಕೆ ಕಾರ್ಯಕ್ರಮ ನಿರೂಪಿಸಿದರು.












