August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ‘ಸ್ವಾತಂತ್ರ್ಯ ಹೋರಾಟಗಾರರ ಋಣ ನಮ್ಮೆಲ್ಲರ ಮೇಲಿದೆ. ಅವರ ಕನಸನ್ನು ನನಸು ಮಾಡುವ ಕಡೆಗೆ ನಮ್ಮ ನಿರಂತರ ಪ್ರಯತ್ನ ಇರಬೇಕಾಗಿದೆ. ನಮ್ಮ ಪ್ರಜಾಪ್ರಭುತ್ವದ ರಕ್ಷಣೆಗೆ ನಾವು ಸದಾ ಸಿದ್ಧರಾಗಿರಬೇಕು’ ಎಂದು ವಕೀಲ ಬಿ.ಎಂ.ಭಟ್ ಹೇಳಿದರು.

ಅವರು ಬೆಳ್ತಂಗಡಿ ಶ್ರೀ ಗುರುದೇವ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಶ್ರೀ ಗುರುದೇವ ವಿದ್ಯಾಸಂಸ್ಥೆಯ ಸ್ಥಾಪಕರಾದ ಕೀರ್ತಿಶೇಷ ವಸಂತ ಬಂಗೇರರು ಮರೆಯಲಾಗದ ಮಾಣಿಕ್ಯ. ನಿಜವಾದ ಸ್ವಾತಂತ್ರ್ಯವನ್ನು ಅವರು ಜನ ಸಾಮಾನ್ಯರ ಪಾಲಿಗೆ ನಿರಂತರವಾಗಿ ನೀಡುವ ಕಡೆಗೆ ಅವಿರತ ಹೋರಾಟವನ್ನು ಮಾಡುತ್ತಾ ಬಂದವರಾಗಿದ್ದರು ಎಂದ ಅವರು ಸಮಾನತೆ, ಸ್ವಾತಂತ್ರ್ಯ, ಭ್ರಾತೃತ್ವ ನಮ್ಮ ವಿಚಾರಗಳಾಗಲಿ ಎಂದು ಕರೆ ನೀಡಿದರು.

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ದ್ವಿತೀಯ ಬಿ.ಸಿ. ಎ.ವಿದ್ಯಾರ್ಥಿನಿ ಸ್ವಾತಿ, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ಪ್ರಸ್ತಾವಿಸಿದರು. ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಸೌಜನ್ಯ ಪರಿಚಯಿಸಿ, ಗಣಕವಿಜ್ಞಾನ ವಿಭಾಗದ ಉಪನ್ಯಾಸಕಿ ಶುಭಲಕ್ಷ್ಮಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಪ್ರಥಮ ದರ್ಜೆ ಕಾಲೇಜಿನ ಕನ್ನಡ ಭಾಷಾ ಉಪನ್ಯಾಸಕ ಸತೀಶ್ ಸಾಲಿಯಾನ್ ವಂದಿಸಿದರು.

Related posts

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಆಮಂತ್ರಣ ವೇದಿಕೆ ಜಿಲ್ಲಾ ಅಧ್ಯಕ್ಷರಾಗಿ ವಿಂಧ್ಯಾ ಎಸ್.ರೈ ಮತ್ತು ಉಪಾಧ್ಯಕ್ಷರಾಗಿ ಅನಿತಾ ಶೆಟ್ಟಿ ಆಯ್ಕೆ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya
error: Content is protected !!