ಶಿಶಿಲ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆ ಬೈಲು ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಎಸ್ದಿಎಮ್ಸಿ ಅಧ್ಯಕ್ಷ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು.
ನಂತರ ಶಿಶಿಲೆಶ್ವರದೇ ದೇವಸ್ಥಾನದವರೆಗೆ ಮೆರವಣಿಗೆ ಮೂಲಕ ಮಕ್ಕಳನ್ನು ಕರೆದೊಯ್ಯಲಾಯಿತು ನಂತರ ನಡೆದ ಸಭಾ ಕಾರ್ಯಕ್ರಮ ಶಾಲಾ ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮುಖ್ಯ ಅತಿಥಿಗಳಾಗಿ ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ರಮೇಶ್ ಬಂಗೇರ ಒಟ್ಲ ಹಾಗೂ ನಿವೃತ್ತ ಶಿಕ್ಷಕಿ ಸುಗುಣಕುಮಾರಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ರತ್ನ ಬಿ ಸ್ವಾಗತಿಸಿದರು. ಗೌರವ ಶಿಕ್ಷಕಿ ರಮ್ಯಾ ಬಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರಾದ ಸಂತೋಷ್ ಕುಮಾರ್ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಹಳೆ ವಿದ್ಯಾರ್ಥಿಗಳು ಮಕ್ಕಳ ಪೋಷಕರು ಊರಿನ ಹಿರಿಯರು ಶೌರ್ಯ ವಿಪತ್ತು ತಂಡದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.












