August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದೇಮುಗೇರು ಅಂಗನವಾಡಿಯಲ್ಲಿ 80ನೇ ವರ್ಷದ ಸ್ವಾತ್ರಂತ್ರೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತು ವ್ಯಾಪ್ತಿಯ ಸುದೇಮುಗೇರು ಅಂಗನವಾಡಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ. ನೆರವೇರಿಸಿದರು.

ನಂತರ ನಡೆದ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು. ಮುಖ್ಯ ಅತಿಥಿಗಳಾಗಿ ಸುದ್ದಿ ಉದಯ ಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್, ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಪ್ರಸಾದ್ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಪ.ಪಂ. ಮಾಜಿ ಹಿರಿಯ ಸದಸ್ಯ ಹಾಗೂ ಕೆಡಿಪಿ ಸದಸ್ಯರಾದ ಜಗದೀಶ್ ಡಿ. ವಹಿಸಿದ್ದರು.

ವೇದಿಕೆಯಲ್ಲಿ ಅಂಗನವಾಡಿ ಅಧ್ಯಕ್ಷೆ ನಾಝ್‌ಮಿನ್, ಅಂಗನವಾಡಿ ಶಿಕ್ಷಕಿ ಶ್ರೀಮತಿ ದಿವ್ಯಾ ಶೇಖರ್, ಸಹಾಯಕಿ ಶ್ರೀಮತಿ ರೋಹಿಣಿ ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕ್ರೀಡಾ ಕೂಟದ ಸಂಯೋಜಕ ಮಹೇಶ್, ಸಹಾಯಕ ಹಕೀಂ, ಸಹಕಾರ ನೀಡಿದ ಮೋನಿಕಾ ಇವರನ್ನು ಗೌರವಿಸಲಾಯಿತು. ಮೋನಿಕಾ ಪ್ರಾರ್ಥನೆ ಹಾಡಿದರು. ಜಿ.ಪಂ ನೀರು ಸರಬರಾಜು ಇಲಾಖೆಯ ಸಿಬ್ಬಂದಿ ಅಶೋಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya

ಲಯನ್ಸ್ ಕುಟುಂಬ ಮಿಲನ ಸಂಭ್ರಮದ ಹೊನಲು

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya
error: Content is protected !!