ಅಳದಂಗಡಿ: ನೂರುಲ್ ಇಸ್ಲಾಂ ಮದರಸ ಅಳದಂಗಡಿಯಲ್ಲಿ 80ನೇ ಸ್ವಾತಂತ್ರೋತ್ಸವವನ್ನು ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಹಾಗೂ ಊರಿನ ಹಿರಿಯ ಬಂಧುಗಳು ಉಪಸ್ಥಿತರಿದ್ದು, ಅವರ ಸಮ್ಮುಖದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮುಸ್ತಫಾ ಹಿಮಮಿ ಉಸ್ಲಾದ್ ಅವರು ಸ್ವಾತಂತ್ರ್ಯದ ಮಹತ್ವ, ದೇಶದ ಬಗ್ಗೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ, ಏಕತೆ ಹಾಗೂ ಸೌಹಾರ್ದತೆಯ ಕುರಿತು ಪ್ರೇರಣಾದಾಯಕ ಭಾಷಣ ಮಾಡಿದರು.
ಸ್ವಾತಂತ್ರೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ಮದರಸಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು.












