August 15, 2026
ಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ಸ್ವಾತಂತ್ರ್ಯವೆ0ದರೆ ನಮಗೆ ಇಷ್ಟ ಬಂದ0ತೆ ಬದುಕುವ ಹಕ್ಕು ಮಾತ್ರವಲ್ಲ; ದೇಶ, ಸಂವಿಧಾನ, ಸಮಾಜ ಹಾಗೂ ಭವಿಷ್ಯದ ಪೀಳಿಗೆಯೆಡೆಗೆ ಕರ್ತವ್ಯ ಮತ್ತು ಜವಾಬ್ದಾರಿಯನ್ನೂ ಒಳಗೊಂಡಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ನಿವೃತ್ತ ಭಾರತೀಯ ಸೇನಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಕೆ.ವಿ. ಸುಬ್ಬಣ್ಣ ಬಯಲು ರಂಗಮ0ದಿರದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ, ಪಾಲಕರು, ಪೋಷಕರು ಹಾಗೂ ಊರಿನ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ‍್ಯೋತ್ತರ ಭಾರತದ ಸಾಧನೆ, ರಾಷ್ಟ್ರೀಯ ಭದ್ರತೆ, ಪ್ರಜಾಪ್ರಭುತ್ವ, ಸಂವಿಧಾನ, ವೈವಿಧ್ಯತೆಯಲ್ಲಿ ಏಕತೆ ಹಾಗೂ ದೇಶದ ಭವಿಷ್ಯ ನಿರ್ಮಾಣದಲ್ಲಿ ಯುವಜನರ ಪಾತ್ರದ ಕುರಿತು ವಿವರವಾಗಿ ಮಾತನಾಡಿದರು.

ಅಜಯ್ ವಾರಿಯರ್ ತಂಡದ ವತಿಯಿಂದ ವಿಶೇಷ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜನಪ್ರಿಯ ದೇಶ ಭಕ್ತಿಗೀತೆಗಳು, ಸುಮಧುರ ಸಂಗೀತ ಹಾಗೂ ಮನಮೋಹಕ ಗಾಯನದ ಮೂಲಕ ಕಲಾವಿದರು ವಿದ್ಯಾರ್ಥಿಗಳನ್ನು ರಂಜಿಸಿದರು.

ಪ್ರತಿಷ್ಠಾನದ ವ್ಯವಸ್ಥಾಪಕ ಅಧ್ಯಕ್ಷ ಡಾ ಎಂ ಮೋಹನ ಆಳ್ವ,  ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ ವಿನಯ ಆಳ್ವ, ಆಡಳಿತ ಮಂಡಳಿಯ ಬಾಲಕೃಷ್ಣ ಆಳ್ವ,  ಡಾ ಹನ ಶೆಟ್ಟಿ, ಡಾ. ಗ್ರೀಷ್ಮಾ ಆಳ್ವ ಇದ್ದರು.

ಉಪನ್ಯಾಸಕರಾದ ವೇಣುಗೋಪಾಲ ಕೆ. ಶೆಟ್ಟಿ ಹಾಗೂ ಡಾ.ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಪರೇಡ್ ಕಮಾಂಡರ್ ಆಗಿ ಎನ್‌ಸಿಸಿ ಕೆಡೆಟ್ ಕ್ಯಾ. ಯದುನಂದನ್ ಹಾಗೂ  ಪಿಒ ಕೆಡೆಟ್ ಹಾರ್ದಿಕ್ ಹರ್ಷ ಶೆಟ್ಟಿ ವಂದಿಸಿದರು.

Related posts

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!