ಉಜಿರೆ : “ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಹಾಗೂ ಮೌಲ್ಯಗಳನ್ನು ತಿಳಿದು, ನಮ್ಮ ದೇಶಕ್ಕಾಗಿ ನಾವು ಏನು ನಮ್ಮ ಕೊಡುಗೆ ನೀಡಬಹುದು ಎಂದು ಯೋಚಿಸಬೇಕು” ಎಂದು ಯೋಗ ತರಬೇತುರರಾದ ಪವಿತ್ರ ಸಂದೇಶ್ ಹೇಳಿದರು.
ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣ ನಡೆಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದಿನದ ಮಹತ್ವದ ಕುರಿತು ಭಾಷಣ, ದೇಶಭಕ್ತಿ ಗೀತೆ, ಸಮೂಹ ನೃತ್ಯ ಹಾಗೂ ನಾಟಕ ಪ್ರಸ್ತುತಿ ಆಯೋಜಿಸಲಾಗಿತ್ತು.
ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿ ಅರ್ನವ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.












