ಗುರುವಾಯನಕೆರೆ: ಗುರುವಾಯನಕೆರೆ ಅಯ್ಯಪ್ಪ ಮಂದಿರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಕ್ತಿಭಾವ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.
ಅಯ್ಯಪ್ಪ ಮಂದಿರದ ಅಧ್ಯಕ್ಷ ರಾಜೇಂದ್ರ ನಾಯರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಹಾಗೂ ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿ, ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅಯ್ಯಪ್ಪ ವ್ರತಧಾರಿಗಳು, ಭಕ್ತರು ಹಾಗೂ ಮಂದಿರದ ಹಿತೈಷಿಗಳು ಉಪಸ್ಥಿತರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.












