August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ನವೋದಯ ಯುವಕ ಮಂಡಲ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ: ವಿದ್ಯಾರ್ಥಿಗಳಿಗೆ “ಅಕ್ಷರ ದೀವಿಗೆ” ಹಾಗೂ ಶಿಕ್ಷಕರಿಗೆ ಗೌರವ

ನಾವೂರು: 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಅಂಗವಾಗಿ ನಾವೂರು ನವೋದಯ ಯುವಕ ಮಂಡಲ ವತಿಯಿಂದ ವಿದ್ಯಾರ್ಥಿಗಳ ಅಕ್ಷರ ಪಯಣಕ್ಕೆ ಪ್ರೋತ್ಸಾಹ ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮತ್ತು ಸಿಬ್ಬಂದಿಗೆ ಗೌರವ ಸಲ್ಲಿಸುವ ವಿಶಿಷ್ಟ ಕಾರ್ಯಕ್ರಮವು ಜರುಗಿತು.

ನಾವೂರು ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ಹಾಗೂ ಜ್ಞಾನಾರ್ಜನೆಗೆ ಆಸರೆಯಾಗುವ ದಿಸೆಯಲ್ಲಿ “ಅಕ್ಷರ ದೀವಿಗೆ’ (ಜ್ಞಾನದ ಲೇಖನಿ)ಯನ್ನು ವಿತರಿಸಲಾಯಿತು.

ಇದರೊಂದಿಗೆ, ನಾಳಿನ ಪ್ರಜೆಗಳನ್ನು ರೂಪಿಸುವ ಜ್ಞಾನದಾತರಾದ ಶಿಕ್ಷಕ ವೃಂದದವರಿಗೆ ಹಾಗೂ ಮಕ್ಕಳಿಗೆ ನಿತ್ಯ ಅನ್ನದಾಸೋಹ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿಯವರಿಗೆ ವಿಶೇಷ ಗೌರವಪೂರ್ವಕವಾಗಿ ಲೇಖನಿಯನ್ನು ಕೊಡುಗೆಯಾಗಿ ನೀಡಿ ಗೌರವಿಸಲಾಯಿತು.

ಮಕ್ಕಳ ಬರವಣಿಗೆಗೆ ಬೆಳಕಾಗುವ ಮತ್ತು ಸಾಧನೆಯ ಹಾದಿಗೆ ಸ್ಫೂರ್ತಿಯಾಗುವ ಈ ವಿನೂತನ ‘ಅಕ್ಷರ ಕೊಡುಗೆ ಕಾರ್ಯಕ್ರಮದಲ್ಲಿ ನವೋದಯ ಯುವಕ ಮಂಡಲದ ಅಧ್ಯಕ್ಷ ಸ್ವರೂಪ್ ಶೇಖರ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಗೌಡ ನಾಗಾಜೆ, ಕೋಶಾಧಿಕಾರಿ ಬಾಲಕೃಷ್ಣ ಆಚಾರಿ, ಪ್ರೌಢಶಾಲೆ ಮುಖ್ಯ ಶಿಕ್ಷಕ ರಾಜೇಂದ್ರ, ಶಾಲೆಯ ಮುಖ್ಯ ಶಿಕ್ಷಕರಾದ ಅಮಿತಾ , ಎಸ್.ಡಿ.ಎಂ.ಸಿ ಅಧ್ಯಕ್ಷ ಡಾ.ಪ್ರದೀಪ್ ಬಂಗಾಡಿ, ಸಿ.ಎ. ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಸಾಲಿಯಾನ್ ಮೊರ್ತಜೆ ಹಾಗೂ ಯುವಕ ಮಂಡಲದ ಎಲ್ಲಾ ಪದಾಧಿಕಾರಿಗಳು, ಸಮಿತಿಯ ಸದಸ್ಯರು ಮತ್ತು ಊರಿನ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಶಿಶಿಲ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳ ಭೇಟಿ: ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ಕೊಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಸಮಾಲೋಚನಾ ಸಭೆ

Suddi Udaya
error: Content is protected !!