August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪಟ್ರಮೆ: ಗೆಳೆಯರ ಬಳಗದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಪಟ್ರಮೆಯ ದಲಿತ ಹಕ್ಕು ಸಮಿತಿ ಕಚೇರಿ ಅಂಬೆಡ್ಕರ್ ಭವನದ ಆವರಣದಲ್ಲಿ ಗೆಳೆಯರ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಹಿರಿಯರಾದ ಮಾಯಿಲ ನೆಕ್ಕರೆ ಧ್ವಜಾರೋಹಣಗೈದು, ಮಾತನಾಡಿ ಬ್ರಿಟೀಷರ ದಬ್ಬಾಳಿಕೆಗಳ ವಿರುದ್ದ ಸೆಟೆದು ನಿಂತು ಸುಂದರ ಸಮೃದ್ದಿಯ ಸಮತೆಯ ಭಾರತದ ಕನಸು ಹೊತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಾರತೀಯರು, ನಾಯಕತ್ವವಹಿಸಿದ ಗಾಂಧೀಜಿ, ಭಗತ್ ಸಿಂಗ್, ಸುಭಾಶ್ಚಂದ್ರ ಬೋಸ್, ಅಂಬೇಡ್ಕರ್ , ನೆಹರೂ ಮೊದಲಾದವರು ಕಂಡ ಭಾರತ ನಿರ್ಮಾಣದತ್ತ ನಾವು ಮುನ್ನಡೆಯಬೇಕಿದೆ. ಇದಕ್ಕಾಗಿ ಡಾ ಬಿ ಆರ್ ಅಂಬೆಡ್ಕರ್ ಒದಗಿಸಿಕೊಟ್ಟ ಶ್ರೇಷ್ಟ ಸಂವಿಧಾನದ ಪ್ರಕಾರ ನಾವೆಲ್ಲರೂ ಬದುಕಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ನ್ಯಾಯವಾದಿ ಹಾಗೂ ಕಾರ್ಮಿಕ ಮುಖಂಡರಾದ ಬಿ.ಯಂ. ಭಟ್, ಧನಂಜಯ, ಜಯಂತ, ವಿಶಾಲು, ರೋಹಿತ್ ನೆಕ್ಕರೆ, ಉಮೇಶ್ ಪಟ್ಟೂರು, ದೀಕ್ಷಿತ್ ಪಟ್ಟೂರು, ರೋಹಿತ್ ಪಟ್ಟೂರು, ಶ್ಯಾಮರಾಜ್, ಹಾರಿಸ್ ಪಟ್ರಮೆ,ವಿನುಶರಮಣ, ಷರೀಫ್, ಚೋಮ ಮೊದಲಾದವರು ಉಪಸ್ಥಿತರಿದ್ದರು. ವಸಂತ ಟೈಲರ್ ಸ್ವಾಗತಿಸಿ, ವಂದಿಸಿದರು.

Related posts

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya
error: Content is protected !!