ಬಜಿರೆ: ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಜಯಶ್ರೀ ನೆರವೇರಿಸಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೇಣೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅರುಣ್ ಕ್ರಾಸ್ತ, ಸದಸ್ಯರಾದ ಲೋಕಯ್ಯ ಪೂಜಾರಿ ಕಂಗಿತ್ತಿಲು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೂಟದ ಅಧ್ಯಕ್ಷ ಗಿರೀಶ್ ಕುಲಾಲ್ ಬಡೆಕ್ಕಿಲ, ಯೋಜನೆಯ ಸೇವಾಪ್ರತಿನಿಧಿ ರೂಪಾ ಚಂದನ, ಎಸ್ಡಿಎಂಸಿ ಉಪಾಧ್ಯಕ್ಷ ಲೋಕೇಶ್ ಕೋರ್ಲೋಡಿ, ಎಸ್ಡಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಪೂಜಾರಿ ಕಲ್ಪನೆ, ಎಲ್ಕೆಜಿ-ಯುಕೆಜಿ ಬೆಟರ್ಮೆಂಟ್ ಕಮಿಟಿಯ ಅಧ್ಯಕ್ಷ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆ ಹರಿಣಿ ಜೈನ್, ತಾಯಂದಿರ ಸಮಿತಿಯ ಮಂಜುಳಾ, ನಮ್ಮ ಶಾಲೆ ನಮ್ಮ ಕೊಡುಗೆ ಸಮಿತಿಯ ಅರುಣ್, ಶಾಲೆಯ ಮುಖ್ಯ ಶಿಕ್ಷಕಿ ರಶ್ಮಿ ಶೆಟ್ಟಿ ಮತ್ತು ಎಸ್ಡಿಎಂಸಿ ಹಾಗೂ ವಿವಿಧ ಕಮಿಟಿಗಳ ಸದಸ್ಯರು, ಪೋಷಕರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ನಾಯಕಿ ಶ್ರೀದೇವಿ ಸೇರಿದಂತೆ ಹಲವು ಮಂದಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಮಾತನಾಡಿದರು ಶಿಕ್ಷಕಿ ಲೀಲಾ ಸ್ವಾಗತಿಸಿದರು.
ವಿದ್ಯಾರ್ಥಿಗಳು ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಮತ್ತು ವೀರಯೋಧರ ವೇಷಧರಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.












