August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಯೋಗ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಯೋಗ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಯೋಗಾಭ್ಯಾಸ, ರಾಷ್ಟ್ರಭಕ್ತಿ ಹಾಗೂ ದೇಶಪ್ರೇಮದ ಭಾವನೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಿತ್ಯದ ಯೋಗಾಭ್ಯಾಸದ ಬಳಿಕ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ಎಲ್ಲರೂ ಭಕ್ತಿಭಾವದಿಂದ ‘ವಂದೇ ಮಾತರಂ’ ಗೀತೆಯನ್ನು ಹಾಡುವ ಮೂಲಕ ಮಾತೃಭೂಮಿಗೆ ಗೌರವ ಸಮರ್ಪಿಸಿದರು.

ನಂತರ ನಡೆದ ಬೌದ್ಧಿಕ ಕಾರ್ಯಕ್ರಮವನ್ನು ಅಶ್ವತ್ ನಡೆಸಿಕೊಟ್ಟರು. ಸ್ವಾತಂತ್ರ್ಯವೆಂದರೆ ಕೇವಲ ಬಂಧನಗಳಿಂದ ಮುಕ್ತಿ ಪಡೆಯುವುದಲ್ಲ; ನಮ್ಮ ಸಂಸ್ಕೃತಿ, ಪರಂಪರೆ, ಮೌಲ್ಯಗಳು ಹಾಗೂ ರಾಷ್ಟ್ರದ ಬಗ್ಗೆ ಜವಾಬ್ದಾರಿಯುತವಾಗಿ ಬದುಕುವುದೇ ನಿಜವಾದ ಸ್ವಾತಂತ್ರ್ಯ ಎಂಬ ಸಂದೇಶವನ್ನು ಸಾರಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೆಳ್ತಂಗಡಿ ಮಹಿಳಾ ಮಂಡಲದ ಅಧ್ಯಕ್ಷೆ ಉಮಾ ರಾವ್ ಅವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ, ದೇಶದ ಏಕತೆ, ಸಂಸ್ಕೃತಿ ಮತ್ತು ರಾಷ್ಟ್ರಭಕ್ತಿಯ ಮಹತ್ವವನ್ನು ನೆನಪಿಸಿದರು.

ಕಾರ್ಯಕ್ರಮದ ಸ್ವಾಗತ ಹಾಗೂ ವಂದನಾರ್ಪಣೆಯನ್ನು ಗಣಪತಿ ನೆರವೇರಿಸಿದರು. ರಾಷ್ಟ್ರಭಕ್ತಿಯೊಂದಿಗೆ ನಡೆದ ಈ ಆಚರಣೆಯನ್ನು ಶಾಖೆಯ ಶಿಕ್ಷಕರಾದ ಕೋಮಲ ನಡಸಿಕೊಟ್ಟರು. ಶಾಖೆಯ ಸಂಚಾಲಕ ವಸಂತ ಹಾಗೂ ಯೋಗಬಂಧುಗಳು ಉಪಸ್ಥಿತರಿದ್ದರು.

Related posts

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೆ-ಸೆಟ್ ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ವಿದ್ಯಾರ್ಥಿನಿ ಅರ್ಚನಾ ರಾಜ್ಯಕ್ಕೆ ಮೂರನೇ ರ‍್ಯಾಂಕ್‌

Suddi Udaya

ಜನಿವಾರ ತೆಗೆಸಿದ ಪ್ರಕರಣ: ತಾಲೂಕು ವಿಪ್ರ ಭಾಂದವರಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ನೆರಿಯ: ಪುಟ್ಟ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!