ಶಿಶಿಲ ಗ್ರಾಮಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾ ಪಂ ಆಡಳಿತಾಧಿಕಾರಿ ಭರತ್ ಕುಮಾರ್ ಎಲ್ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃಧ್ದಿ ಅಧಿಕಾರಿ ರಾಘವೇಂದ್ರ ಗೌಡ , ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಸುಧಿನ್ ಡಿ ,ಸಂದೀಪ್ ಎ ಯಸ್ ಮಾಜಿ ಸದಸ್ಯರು , ಗ್ರಾಮ ಪಂಚಾಯತ್ ಸಿಬ್ಬಂದಿಗಳು ,ಎಲ್ಲಾ ಶಾಲೆಯ ಮುಖ್ಯೊಪಾಧ್ಯಯರು, ಅಧ್ಯಾಪಕರು , ಯಸ್.ಡಿ.ಯಂ.ಸಿ. ಅಧ್ಯಕ್ಷರು, ಊರಿನ ನಾಗರಿಕರು, ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅರೋಗ್ಯ ಇಲಾಖಾ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿವಿಧ ಇಲಾಖಾ ಅಧಿಕಾರಿ ಸಿಬ್ಬಂದಿಗಳು, ಸಂಜೀವಿನಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಎಮ್.ಬಿ.ಕೆ ಹಾಗೂ ಎಲ್ ಸಿಆರ್ ಪಿ ಗಳು ವಿವಿಧ ಸಖಿಗಳು ಹಾಗೂ ಸಂಜೀವಿನಿ ಹಾಗು ಸ್ತ್ರೀ ಶಕ್ತಿ ಸಂಘದ ಎಲ್ಲಾ ಸದಸ್ಯರು , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಶೌರ್ಯ ವಿಪತ್ತು ತಂಡದ ಎಲ್ಲಾ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.












