25.8 C
ಪುತ್ತೂರು, ಬೆಳ್ತಂಗಡಿ
August 16, 2026
Uncategorized

ಅಭ್ಯಾಸ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ-ದೇಶಸೇವೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಮಹತ್ವದ್ದು: ನಿವೃತ್ತ ನೌಕಾದಳ ಸೇನಾನಿ ಶ್ರೀಕೃಷ್ಣ ಭಟ್

ಉಜಿರೆ: ಕಾಶಿಬೆಟ್ಟು, ಪ್ರಗತಿನಗರದ ಅಭ್ಯಾಸ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ನೌಕಾದಳದ ನಿವೃತ್ತ ಸೇನಾನಿ ಎಸ್. ಶ್ರೀಕೃಷ್ಣ ಭಟ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು. ದೇಶದ ಭವಿಷ್ಯವನ್ನು ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದ್ದು, ದೇಶಸೇವೆಯ ಜವಾಬ್ದಾರಿಯನ್ನು ಅರಿತು ಮುನ್ನಡೆಯಬೇಕು ಎಂದು ಅವರು ಪ್ರೇರಣಾದಾಯಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ, ಕಾರ್ಯದರ್ಶಿ ಶಿಲ್ಪಾ, ಆಡಳಿತಾಧಿಕಾರಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಸ್ಥೆಯ ಉಪಪ್ರಾಂಶುಪಾಲ ಚಂದ್ರಶೇಖರ ಗೌಡ ಕಾರ್ಯಕ್ರಮ ನಿರ್ವಹಿಸಿದರು.

Related posts

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya
error: Content is protected !!