27.1 C
ಪುತ್ತೂರು, ಬೆಳ್ತಂಗಡಿ
August 16, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ದಿಡುಪೆ ಫಾಲ್ಸ್‌ನಲ್ಲಿ ನಿಯಮ ಉಲ್ಲಂಘನೆ; ಹೋಂಸ್ಟೇ ಮಾಲೀಕರಿಗೆ ದಂಡ

ಬೆಳ್ತಂಗಡಿ : ತಾಲೂಕಿನ ಜಲಪಾತ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿದ್ದ ನಡುವೆಯೂ ಅರಣ್ಯ ಇಲಾಖೆಯ ಕಣ್ಣುತಪ್ಪಿಸಿ ಕರೆದುಕೊಂಡು ಹೋಗಿದ್ದ ದಿಡುಪೆಯ ನವಗ್ರಹ ಹೋಮ್ ಸ್ಟೇ ಮಾಲೀಕರಿಗೆ ಕುದುರೆಮುಖ ವನ್ಯಜೀವಿ ವಿಭಾಗ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ದಂಡ ವಿಧಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಜು.20 ರಿಂದ ದಿಡುಪೆ ಫಾಲ್ಸ್ ( ಕಡಮಗುಂಡಿ) ಜಲ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಸುರಕ್ಷತೆಯ ಸಲುವಾಗಿ ಮುಂದಿನ ಆದೇಶದವರೆಗೆ ಪ್ರವೇಶ ನಿಷೇಧ ಹೇರಲಾಗಿತ್ತು. ಆದರೆ ಇದರ ನಡುವೆ ದಿಡುಪೆಯ ನವಗ್ರಹ ಹೋಮ್ ಸ್ಟೇ 45 ಮಂದಿ ಪ್ರವಾಸಿಗರನ್ನು ಇಲಾಖೆಯ ಯಾವುದೇ ಅನುಮತಿ ಪಡೆಯದೆ, ನಿಯಮವಾಳಿಗಳನ್ನು ಗಾಳಿಗೆ ತೂರಿ ಆಕ್ರಮ ಪ್ರವೇಶಾತಿ ಮಾಡಿದ ಬಗ್ಗೆ ಆರ್ ಎಫ್ ಓಗೆ ಖಚಿತ ಮಾಹಿತಿ ಬಂದ ಹಿನ್ನಲೆ ಸಿಬಂದಿಗಳೊಂದಿಗೆದಾಳಿ ನಡೆಸಿದಾಗ ಸಿಕ್ಕಿಬಿದ್ದಿದ್ದಾರೆ. ನಿಯಮ ಉಲ್ಲಘಿಂಸಿದ ಅವರಿಗೆ ಆ.16ರಂದು ರೂ.22,500/- ದಂಡ ವಿಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಲಯ ತಿಳಿಸಿದೆ .

Related posts

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!