28.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರಿಪಳ್ಳ ಒಕ್ಕೂಟದ ಆಶ್ರಯದಲ್ಲಿ ಸಂಭ್ರಮದ ‘ಆಟಿದ ಕಮ್ಮೆನ’ ಕಾರ್ಯಕ್ರಮ

ಗುರಿಪಳ್ಳ: ತುಳುನಾಡಿನ ಅಚ್ಚಳಿಯದ ಸಂಸ್ಕೃತಿ ಮತ್ತು ಆಚಾರ-ವಿಚಾರಗಳನ್ನು ಬಿಂಬಿಸುವ ‘ಆಟಿ’ ತಿಂಗಳ ವಿಶೇಷತೆಯನ್ನು ಸಾರುವ ‘ಆಟಿದ ಕಮ್ಮೆನ’ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರಿಪಳ್ಳ ಒಕ್ಕೂಟದ ಆಶ್ರಯದಲ್ಲಿ ಹಾಗೂ ಬೆಳಕು ಜ್ಞಾನ ವಿಕಾಸ ಕೇಂದ್ರ ಗುರಿಪಳ್ಳ ಸಹಯೋಗದೊಂದಿಗೆ ಆ. 16ರಂದು ಅತ್ಯಂತ ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಯೋಜನಾಧಿಕಾರಿ ಯಶೋಧರರವರು, ಆಟಿ ತಿಂಗಳ ವೈಶಿಷ್ಟ್ಯತೆ ಹಾಗೂ ನಮ್ಮ ಹಿರಿಯರು ಆಚರಿಸಿಕೊಂಡು ಬಂದ ಆರೋಗ್ಯ ಪೂರಕ ಸಂಪ್ರದಾಯಗಳ ಮಹತ್ವವನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಮಾತನಾಡಿ, ತುಳುನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಿಕೊಂಡು ಹೋಗುವ ಅಗತ್ಯತೆಯನ್ನು ವಿವರಿಸಿದರು. ವೇದಿಕೆಯಲ್ಲಿ ಇಂದಬೆಟ್ಟು ವಲಯದ ಮೇಲ್ವಿಚಾರಕಿ ಉಷಾ ಉಪಸ್ಥಿತರಿದ್ದು ಶುಭ ಹಾರೈಸಿದರು.

60ಕ್ಕೂ ಹೆಚ್ಚು ವೈವಿಧ್ಯಮಯ ಆಟಿ ಖಾದ್ಯಗಳು ಆಕರ್ಷಣೆ:
ಕಾರ್ಯಕ್ರಮದ ಅಂಗವಾಗಿ ಒಕ್ಕೂಟದ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಶೇಷವಾಗಿ ಒಕ್ಕೂಟದ ಸದಸ್ಯರು ತಯಾರಿಸಿ ತಂದಿದ್ದ ಬಗೆಬಗೆಯ 60 ಬಗೆಯ ಆಟಿ ತಿಂಗಳ ವಿಶೇಷ ಖಾದ್ಯಗಳು ಎಲ್ಲರ ಗಮನ ಸೆಳೆದವು ಹಾಗೂ ಎಲ್ಲರೂ ಆಟಿ ತಿಂಗಳ ರುಚಿಯನ್ನು ಸವಿದರು.


ಕಾರ್ಯಕ್ರಮದಲ್ಲಿ ಶ್ರೀಮತಿ ವಿನುತಾ ಶೆಟ್ಟಿ ಪ್ರಾರ್ಥಿಸಿ, ಸೇವಾಪ್ರತಿನಿಧಿ ಪುಷ್ಪಾವತಿ ಸ್ವಾಗತಿಸಿದರು, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶ್ರೀಮತಿ ಮಧುರ ಕಾರ್ಯಕ್ರಮ ನಿರೂಪಿಸಿದರು . ಶ್ರೀಮತಿ ಅನಿತಾ ವಸಂತ್ ವಂದನಾರ್ಪಣೆಗೈದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya
error: Content is protected !!