ಗುರುವಾಯನಕೆರೆ : ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಸಂಭ್ರಮದ ಸೋಣದಕೋಲ ಆ. 17 ರಂದು ವೈಭವದಿಂದ ಜರುಗಿತು.


ಬೆಳಗ್ಗೆ 9 ಗಂಟೆಗೆ ದೈವದ ಭಂಡಾರವನ್ನು ಮೆರವಣಿಗೆ ಮೂಲಕ ಕ್ಷೇತ್ರಕ್ಕೆ ತರಲಾಯಿತು. ನಂತರ ಸಂಕ್ರಮಣ ಪೂಜೆ ನಡೆಯಿತು.
12 ಗಂಟೆಯಿಂದ ದೈವಸ್ಥಾನದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ಸೋಣಕೋಲ ವೈಭವದಿಂದ ಜರುಗಿತು.

ಕ್ಷೇತ್ರದ ಅನುವಂಶಿಕ ಆಡಳಿತ ಮೋಕ್ತೇಸರಾದ ಸುಖೇಶ್ ಕುಮಾರ್ ಕಡಂಬು, ಸುನೀಶ್ ಕುಮಾರ್ ಕಡಂಬು, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಆನಂದ ಶೆಟ್ಟಿ ವಾತ್ಸಲ್ಯ, ವಿಠಲ ಶೆಟ್ಟಿ, ಚಿತ್ತರಂಜನ್ ಹೆಗ್ಡೆ, ಪ್ರದೀಪ್ ಶೆಟ್ಟಿ, ಪ್ರಕಾಶ್ ಜೈನ್ ಡೇವುಣಿ, ಸೀತಾರಾಮ ಶೆಟ್ಟಿ, ಪ್ರದೀಪ್ ಕುಮಾರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಪ್ರೇಮ್ ಶೆಟ್ಟಿ, ಸಂತೋಷ್ ಕುಮಾರ್ ಜೈನ್, ವೃಷಭ ಆರಿಗಾ, ಧರಣೇಂದ್ರ ಕೆ.ಜೈನ್ ಹಾಗೂ ತಂತ್ರಿ ವಗ೯ದವರು ಉಪಸ್ಥಿತರಿದ್ದರು.
ಊರ ಹಾಗೂ ಪರವೂರ ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ಕೊಡಮಣಿತ್ತಾಯ ದೈವದ ಗಂಧ ಪ್ರಸಾದ ಹಾಗೂ ಅನ್ನಪ್ರಸಾದ ಸ್ವೀಕರಿಸಿ ದೈವದ ಅನುಗ್ರಹಕ್ಕೆ ಪಾತ್ರರಾದರು.












